HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...