HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...