HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...