HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...