Homeಮುಖಪುಟ'ನಾಗರಿಕರನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ': ರಾಹುಲ್ ಗಾಂಧಿ

‘ನಾಗರಿಕರನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ’: ರಾಹುಲ್ ಗಾಂಧಿ

- Advertisement -
- Advertisement -

ನವದೆಹಲಿ: ಶಾಂತಿಯುತವಾಗಿ ಶುದ್ಧಗಾಳಿಗಾಗಿ ಹೋರಾಟ ಮಾಡುತ್ತಿರುವ ನಾಗರಿಕರನ್ನು ಏಕೆ ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. 

ದೆಹಲಿಯಲ್ಲಿ ವಾಯು ಗುಣಮಟ್ಟ ಹದಗೆಡುತ್ತಿರುವುದನ್ನು ವಿರೋಧಿಸಿ ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದ ಪರಿಸರವಾದಿ ವಿಮ್ಲೇಯ ಝಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಜನರನ್ನು ಪೊಲೀಸರು ಬಂಧಿಸಿ ಬಸ್ಸಿಗೆ ತಳ್ಳಿ ಅಪರಾಧಿಗಳಂತೆ ನಡೆಸಿಕೊಂಡಿದ್ದಾರೆ ಎಂದು ಸರ್ಕಾರವನ್ನು ಟೀಕಿಸಿದ್ದಾರೆ. 

“ಶುದ್ಧ ಗಾಳಿ ಕೇಳುವ ನಾಗರಿಕರ ಮೇಲೆ ದಾಳಿ ಮಾಡುವ ಬದಲು, ಮೊದಲೇ ವಾಯು ಮಾಲಿನ್ಯದ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ. 

ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದನ್ನು ವಿರೋಧಿಸಿ ಪೋಷಕರು ಮತ್ತು ಪರಿಸರ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಭಾನುವಾರ ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ ನಡೆಸಿದರು. 

ಪೊಲೀಸರ ಪ್ರಕಾರ, ಅನುಮತಿಯಿಲ್ಲದೆ ಸಭೆ ಸೇರಿದ್ದಕ್ಕಾಗಿ ಹಲವಾರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ವಾಯು ಮಾಲಿನ್ಯವು ಕೋಟ್ಯಂತರ ಭಾರತೀಯರ ಮೇಲೆ ಪರಿಣಾಮ ಬೀರುತ್ತಿದ್ದು, ನಮ್ಮ ಮಕ್ಕಳು ಮತ್ತು ನಮ್ಮ ರಾಷ್ಟ್ರದ ಭವಿಷ್ಯಕ್ಕೆ ಹಾನಿ ಉಂಟುಮಾಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. 

ಆದರೆ “ಮತ ಚೋರಿ” ಮೂಲಕ ಅಧಿಕಾರಕ್ಕೆ ಬಂದ ಸರ್ಕಾರವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ಅಥವಾ ಈ ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸುತ್ತಿಲ್ಲ ಎಂದು ಗಾಂಧಿ ಹೇಳಿದರು.

ಪ್ರತಿಭಟನಾಕಾರರಲ್ಲಿ ಹಲವರು ತಾಯಂದಿರು ಮಕ್ಕಳೊಂದಿಗೆ ಇದ್ದು, ಶುದ್ಧ ಗಾಳಿಯನ್ನು ಖಚಿತಪಡಿಸಿಕೊಳ್ಳಲು ತುರ್ತು ಸರ್ಕಾರದ ಕ್ರಮವನ್ನು ಒತ್ತಾಯಿಸಲು ತಾವು ಒಟ್ಟುಗೂಡಿದ್ದೇವೆ ಎಂದು ಹೇಳಿದ್ದಾರೆ.

ನವದೆಹಲಿಯ ಉಪ ಪೊಲೀಸ್ ಆಯುಕ್ತ ದೇವೇಶ್ ಕುಮಾರ್ ಮಹ್ಲಾ, ಬಂಧನಗಳು ಮುಂಜಾಗ್ರತಾ ಕ್ರಮವಾಗಿ ನಡೆದಿವೆ ಎಂದು ಸಮರ್ಥಿಸಿಕೊಂಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...