Homeಮುಖಪುಟಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: 'ಜಮಾತೆ-ಇ-ಇಸ್ಲಾಮಿ ಹಿಂದ್' ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನದ ನಡುವಿನ ನಿರಂತರ ಉದ್ವಿಗ್ನತೆ, ಶೆಲ್ ದಾಳಿ ಮತ್ತು ದಾಳಿಗಳ ಬಗ್ಗೆ ಜಮಾತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. “ಯುದ್ಧ ಮತ್ತು ಕಲಹ ಯಾರ ಹಿತಾಸಕ್ತಿಯಲ್ಲೂ ಅಲ್ಲ; ಗಡಿ ಪ್ರದೇಶಗಳಲ್ಲಿ ನಾಗರಿಕರಿಗೆ ರಕ್ಷಣೆ ಬೇಕು” ಎಂದು ಆಗ್ರಹಿಸಿದ್ದಾರೆ.

ಸಂಘರ್ಷವನ್ನು ಹೆಚ್ಚಿಸುವ ಉದ್ದೇಶವಿಲ್ಲ ಎಂದು ಭಾರತ ಸರ್ಕಾರ ಪದೇ ಪದೇ ಹೇಳುತ್ತಿರುವುದನ್ನು ಹುಸೈನಿ ಸ್ವಾಗತಿಸಿದರು.

ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ತಮ್ಮ ಜನರ ಸಮೃದ್ಧಿ-ಪ್ರಗತಿಗಾಗಿ ಶ್ರಮಿಸುತ್ತಿರುವಾಗ ಬಡತನ ಮತ್ತು ಅಭಾವದೊಂದಿಗೆ ಹೋರಾಡುತ್ತಿವೆ ಎಂದು ಅವರು ಒತ್ತಿ ಹೇಳಿದರು.

ಎರಡೂ ರಾಷ್ಟ್ರಗಳು ಪರಮಾಣು ಶಕ್ತಿಗಳಾಗಿರುವುದರಿಂದ ಯುದ್ಧ ಮತ್ತು ಅಶಾಂತಿ ಯಾರ ಹಿತಾಸಕ್ತಿಗೂ ಪೂರಕವಾಗಿರುವುದಿಲ್ಲ. ಎರಡೂ ದೇಶಗಳ ಬಡ ಜನಸಂಖ್ಯೆಗೆ ಹೆಚ್ಚು ಹಾನಿ ಮಾಡುತ್ತದೆ ಎಂದು ಅವರು ಎಚ್ಚರಿಸಿದರು. ಸುಸ್ಥಿರ ಶಾಂತಿಯತ್ತ ತ್ವರಿತ ಮತ್ತು ಸ್ಪಷ್ಟ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಎರಡೂ ಕಡೆಯ ರಾಜಕೀಯ ಮತ್ತು ಮಿಲಿಟರಿ ನಾಯಕತ್ವವನ್ನು ಒತ್ತಾಯಿಸಿದರು.

ಭಾರತದ ಗಡಿ ಪ್ರದೇಶಗಳಲ್ಲಿ ನಾಗರಿಕ ಸಾವುನೋವುಗಳ ವರದಿಗಳನ್ನು ಉಲ್ಲೇಖಿಸಿದ ಹುಸೈನಿ, ಮುಗ್ಧ ನಾಗರಿಕರು ಎದುರಿಸುತ್ತಿರುವ ಬೆದರಿಕೆಗಳು ತುರ್ತು ಗಮನವನ್ನು ಬಯಸುತ್ತವೆ ಎಂದು ಒತ್ತಿ ಹೇಳಿದ ಅವರು, ಕೊಲ್ಲಲ್ಪಟ್ಟವರ ಕುಟುಂಬಗಳಿಗೆ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದರು. ಅವರಿಗೆ ಅಗತ್ಯ ನೆರವು ಮತ್ತು ರಕ್ಷಣೆಯನ್ನು ಒದಗಿಸಲು ಸರ್ಕಾರವನ್ನು ಆದ್ಯತೆ ನೀಡುವಂತೆ ಕರೆ ನೀಡಿದರು.

ಪಾಕಿಸ್ತಾನದ ಶೆಲ್ ದಾಳಿಯಲ್ಲಿ 4 ಮಕ್ಕಳು ಸೇರಿದಂತೆ ಕನಿಷ್ಠ 16 ನಾಗರಿಕರು ಸಾವನ್ನಪ್ಪಿದ್ದಾರೆ. ಒಬ್ಬ ಸೈನಿಕ ಕೂಡ ಸಾವನ್ನಪ್ಪಿದ್ದಾನೆ.

“ಮಾಧ್ಯಮ ವರದಿಗಳ ಪ್ರಕಾರ, ಗಡಿಯ ಇನ್ನೊಂದು ಬದಿಯಲ್ಲಿ ಹಲವಾರು ನಾಗರಿಕರು ಸಹ ಸಾವನ್ನಪ್ಪಿದ್ದಾರೆ. ಜನಾಂಗ, ಧರ್ಮ, ಭಾಷೆ, ರಾಷ್ಟ್ರೀಯತೆ ಅಥವಾ ವರ್ಗವನ್ನು ಲೆಕ್ಕಿಸದೆ ಮುಗ್ಧ ನಾಗರಿಕರನ್ನು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ತೀವ್ರ ದುರಂತ. ಎಲ್ಲ ಸಂದರ್ಭಗಳಲ್ಲಿಯೂ ಮುಗ್ಧ ಮಾನವ ಜೀವಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವುದು ಎಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದರು.

ಗಡಿಯ ಪಾಕಿಸ್ತಾನದ ಭಾಗದಲ್ಲಿ ನಾಗರಿಕರ ಸಾವುಗಳ ಮಾಧ್ಯಮ ವರದಿಗಳನ್ನು ಅವರು ಒಪ್ಪಿಕೊಂಡರು. ಅವರ ಗುರುತನ್ನು ಲೆಕ್ಕಿಸದೆ, ಮುಗ್ಧ ನಾಗರಿಕರನ್ನು; ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದು ತೀವ್ರ ದುರಂತ ಎಂದು ಹೇಳಿದರು. ಎಲ್ಲಾ ಸಂದರ್ಭಗಳಲ್ಲಿಯೂ ಮುಗ್ಧ ಮಾನವ ಜೀವಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ದೇಶಗಳ ಸಾಮೂಹಿಕ ಜವಾಬ್ದಾರಿಯನ್ನು ಅವರು ಒತ್ತಿ ಹೇಳಿದರು.

ಈ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಗಂಭೀರ ಸಮಸ್ಯೆ ಎಂದು ಎತ್ತಿ ತೋರಿಸಿದ ಹುಸೇನಿ, ಭಾರತ ಮತ್ತು ಪಾಕಿಸ್ತಾನ ಎರಡೂ ನಾಗರಿಕರಿಗೆ ಭಾರಿ ನಷ್ಟವನ್ನುಂಟುಮಾಡಿವೆ. ಈಗ ಸಂಕುಚಿತ ಹಿತಾಸಕ್ತಿಗಳನ್ನು ಮೀರಿ ಈ ಪ್ರಮುಖ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವತ್ತ ಗಮನಹರಿಸುವ ಸಮಯ ಬಂದಿದೆ” ಎಂದು ಅವರು ಹೇಳಿದರು.

ಪಾಕಿಸ್ತಾನದ ಸಶಸ್ತ್ರ ಪಡೆಗಳು ಗುರುವಾರ ರಾತ್ರಿ ಮತ್ತು ಶುಕ್ರವಾರ ಬೆಳಿಗ್ಗೆ ಭಾರತದ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು ಎಂದು ಭಾರತೀಯ ಸೇನೆ ಹೇಳಿದೆ. ಆದರೆ, ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

“ಪಾಕಿಸ್ತಾನ ಸಶಸ್ತ್ರ ಪಡೆಗಳು 2025 ರ ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು” ಎಂದು ಸೇನೆಯು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...