HomeಅಂಕಣಗಳುKarnataka against SIRSIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

- Advertisement -
- Advertisement -

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್ ಜಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮತ್ತು ಮತದಾರರ ಹಕ್ಕುಗಳ ರಕ್ಷಣೆಗಾಗಿ ರಾಜ್ಯಾದ್ಯಂತ ಅತ್ಯಂತ ವಿಸ್ತಾರವಾದ ಚಳವಳಿ ರೂಪಿಸಲು ತೀರ್ಮಾನಿಸಲಾಗಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯ ನಾಯಕರಾದ ನೂರ್ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಸಾರ್ವಜನಿಕರ ಯಾವುದೇ ಮನವಿಗಳಿಗೆ ಬೆಲೆ ಕೊಡದೆ ಸರ್ವಾಧಿಕಾರಿಯಂತೆ ‘ಎಸ್‌ಐಆರ್’ (SIR) ವ್ಯವಸ್ಥೆಯನ್ನು ಜಾರಿ ಮಾಡುತ್ತಿದೆ ಎಂದು ನೂರ್ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಿಂದಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರು ತಮ್ಮ ವೋಟಿಂಗ್ ಹಕ್ಕನ್ನೇ ಕಳೆದುಕೊಂಡಿದ್ದಾರೆ. ಈ ವ್ಯವಸ್ಥೆ ಅತ್ಯಂತ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಇದರ ವಿರುದ್ಧ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಆಯೋಗ ಮಾತ್ರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಹೊಸ ಸಾಫ್ಟ್‌ವೇರ್ ನಿಯಮಗಳಿಂದಾಗಿ ರಾಜ್ಯದ ಒಂದು ಕೋಟಿಗೂ ಅಧಿಕ ಮಂದಿ ವೋಟಿಂಗ್ ಹಕ್ಕಿನಿಂದ ವಂಚಿತರಾಗುವ ಸ್ಪಷ್ಟ ಮುನ್ಸೂಚನೆಗಳು ಕಾಣಿಸುತ್ತಿವೆ. ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಅನಕ್ಷರಸ್ಥರಿಗೆ ಇದರಿಂದ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ‘ತಾರ್ಕಿಕ ವ್ಯತ್ಯಾಸ’ (Logical Discrepancy) ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುತ್ತಿದ್ದು, ಅಲ್ಲಿಗಿಂತಲೂ ಕಠಿಣ ನಿಯಮಗಳನ್ನು ಇಲ್ಲಿ ಹೇರಲಾಗುತ್ತಿದೆ. ಇದರ ಪರಿಣಾಮವಾಗಿ ಮುಂದಿನ ತಿಂಗಳೇ ಕೋಟ್ಯಂತರ ಜನರಿಗೆ ನೋಟಿಸ್ ಬರಲಿದ್ದು, ದಾಖಲೆಗಳನ್ನು ಒದಗಿಸಲಾಗದೆ ಬಡವರು ತತ್ತರಿಸುವ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಮತ ಕಾವಲು ಸಮಿತಿಯ 5 ಪ್ರಮುಖ ಕಾರ್ಯಸೂಚಿಗಳು:

ಈ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಚನೆಯಾಗಿರುವ ‘ನಾಗರಿಕ ಮತ ಕಾವಲು ಸಮಿತಿ’ಯು ಐದು ಪ್ರಮುಖ ಕಾರ್ಯಸೂಚಿಗಳೊಂದಿಗೆ ಕೆಲಸ ಮಾಡಲಿದೆ:

  1. SIR ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ದಿನನಿತ್ಯದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳು ಹಾಗೂ ಮಾಧ್ಯಮಗಳ ಗಮನಕ್ಕೆ ತರುವುದು.
  2. ಜನರ ಗೊಂದಲಗಳನ್ನು ಪರಿಹರಿಸಿ ಸೂಕ್ತ ರೀತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನೆರವಾಗುವುದು.
  3. ಸರ್ಕಾರ ಘೋಷಿಸಿರುವ ಸಹಾಯವಾಣಿ ಮತ್ತು ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ ವಿತರಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನಿಗಾವಹಿಸುವುದು.
  4. ಪ್ರತಿ ಬೂತ್ ಮಟ್ಟದಲ್ಲೂ ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಿ, ನೋಟಿಸ್ ಪಡೆದವರಿಗೆ ನೆರವಾಗುವುದು ಹಾಗೂ ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಸಂಘಟಿಸಿ ಮರು-ಸೇರ್ಪಡೆಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವುದು.
  5. ಅರ್ಹ ಮತದಾರರ ರಕ್ಷಣೆಗಾಗಿ ತಕ್ಷಣವೇ ‘ವಿಶೇಷ ಗ್ರಾಮ ಅಥವಾ ವಾರ್ಡ್ ಸಭೆ’ಗಳನ್ನು ಕರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವುದು.

ಈ ಎಲ್ಲ ಅಂಶಗಳ ಯಶಸ್ವಿ ಅನುಷ್ಠಾನಕ್ಕಾಗಿ ಜುಲೈ 8 ರಿಂದ 15 ರವರೆಗೆ ರಾಜ್ಯಾದ್ಯಂತ ಬೂತ್ ಮಟ್ಟದವರೆಗೂ ಸರಣಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಈ ಮಹತ್ವದ ‘ಮತ ಕಾವಲು ಅಭಿಯಾನ’ದಲ್ಲಿ ರಾಜ್ಯದ ಎಲ್ಲ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕ-ಯುವತಿಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಭಿಯಾನದಲ್ಲಿ ಕೈಜೋಡಿಸಲು ಇಚ್ಛಿಸುವರು 96060 87560 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಭಾಗಿಯಾಗಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ರೈತ ಹೋರಾಟಗಾರ ವೀರಸಂಗಯ್ಯ, ತಾರಾ ರಾವ್, ಸೀತಾರಾಮ್ ಗುಂಡಪ್ಪ, ತಾಹೀರ್ ಹುಸೇನ್, ಬಸವರಾಜ್ ಕೌತಾಳ್, ಬಾಲಕೃಷ್ಣಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...