HomeಅಂಕಣಗಳುKarnataka against SIRSIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

- Advertisement -
- Advertisement -

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್ ಜಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮತ್ತು ಮತದಾರರ ಹಕ್ಕುಗಳ ರಕ್ಷಣೆಗಾಗಿ ರಾಜ್ಯಾದ್ಯಂತ ಅತ್ಯಂತ ವಿಸ್ತಾರವಾದ ಚಳವಳಿ ರೂಪಿಸಲು ತೀರ್ಮಾನಿಸಲಾಗಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯ ನಾಯಕರಾದ ನೂರ್ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಸಾರ್ವಜನಿಕರ ಯಾವುದೇ ಮನವಿಗಳಿಗೆ ಬೆಲೆ ಕೊಡದೆ ಸರ್ವಾಧಿಕಾರಿಯಂತೆ ‘ಎಸ್‌ಐಆರ್’ (SIR) ವ್ಯವಸ್ಥೆಯನ್ನು ಜಾರಿ ಮಾಡುತ್ತಿದೆ ಎಂದು ನೂರ್ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಿಂದಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರು ತಮ್ಮ ವೋಟಿಂಗ್ ಹಕ್ಕನ್ನೇ ಕಳೆದುಕೊಂಡಿದ್ದಾರೆ. ಈ ವ್ಯವಸ್ಥೆ ಅತ್ಯಂತ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಇದರ ವಿರುದ್ಧ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಆಯೋಗ ಮಾತ್ರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಹೊಸ ಸಾಫ್ಟ್‌ವೇರ್ ನಿಯಮಗಳಿಂದಾಗಿ ರಾಜ್ಯದ ಒಂದು ಕೋಟಿಗೂ ಅಧಿಕ ಮಂದಿ ವೋಟಿಂಗ್ ಹಕ್ಕಿನಿಂದ ವಂಚಿತರಾಗುವ ಸ್ಪಷ್ಟ ಮುನ್ಸೂಚನೆಗಳು ಕಾಣಿಸುತ್ತಿವೆ. ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಅನಕ್ಷರಸ್ಥರಿಗೆ ಇದರಿಂದ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ‘ತಾರ್ಕಿಕ ವ್ಯತ್ಯಾಸ’ (Logical Discrepancy) ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುತ್ತಿದ್ದು, ಅಲ್ಲಿಗಿಂತಲೂ ಕಠಿಣ ನಿಯಮಗಳನ್ನು ಇಲ್ಲಿ ಹೇರಲಾಗುತ್ತಿದೆ. ಇದರ ಪರಿಣಾಮವಾಗಿ ಮುಂದಿನ ತಿಂಗಳೇ ಕೋಟ್ಯಂತರ ಜನರಿಗೆ ನೋಟಿಸ್ ಬರಲಿದ್ದು, ದಾಖಲೆಗಳನ್ನು ಒದಗಿಸಲಾಗದೆ ಬಡವರು ತತ್ತರಿಸುವ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಮತ ಕಾವಲು ಸಮಿತಿಯ 5 ಪ್ರಮುಖ ಕಾರ್ಯಸೂಚಿಗಳು:

ಈ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಚನೆಯಾಗಿರುವ ‘ನಾಗರಿಕ ಮತ ಕಾವಲು ಸಮಿತಿ’ಯು ಐದು ಪ್ರಮುಖ ಕಾರ್ಯಸೂಚಿಗಳೊಂದಿಗೆ ಕೆಲಸ ಮಾಡಲಿದೆ:

  1. SIR ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ದಿನನಿತ್ಯದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳು ಹಾಗೂ ಮಾಧ್ಯಮಗಳ ಗಮನಕ್ಕೆ ತರುವುದು.
  2. ಜನರ ಗೊಂದಲಗಳನ್ನು ಪರಿಹರಿಸಿ ಸೂಕ್ತ ರೀತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನೆರವಾಗುವುದು.
  3. ಸರ್ಕಾರ ಘೋಷಿಸಿರುವ ಸಹಾಯವಾಣಿ ಮತ್ತು ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ ವಿತರಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನಿಗಾವಹಿಸುವುದು.
  4. ಪ್ರತಿ ಬೂತ್ ಮಟ್ಟದಲ್ಲೂ ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಿ, ನೋಟಿಸ್ ಪಡೆದವರಿಗೆ ನೆರವಾಗುವುದು ಹಾಗೂ ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಸಂಘಟಿಸಿ ಮರು-ಸೇರ್ಪಡೆಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವುದು.
  5. ಅರ್ಹ ಮತದಾರರ ರಕ್ಷಣೆಗಾಗಿ ತಕ್ಷಣವೇ ‘ವಿಶೇಷ ಗ್ರಾಮ ಅಥವಾ ವಾರ್ಡ್ ಸಭೆ’ಗಳನ್ನು ಕರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವುದು.

ಈ ಎಲ್ಲ ಅಂಶಗಳ ಯಶಸ್ವಿ ಅನುಷ್ಠಾನಕ್ಕಾಗಿ ಜುಲೈ 8 ರಿಂದ 15 ರವರೆಗೆ ರಾಜ್ಯಾದ್ಯಂತ ಬೂತ್ ಮಟ್ಟದವರೆಗೂ ಸರಣಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಈ ಮಹತ್ವದ ‘ಮತ ಕಾವಲು ಅಭಿಯಾನ’ದಲ್ಲಿ ರಾಜ್ಯದ ಎಲ್ಲ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕ-ಯುವತಿಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಭಿಯಾನದಲ್ಲಿ ಕೈಜೋಡಿಸಲು ಇಚ್ಛಿಸುವರು 96060 87560 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಭಾಗಿಯಾಗಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ರೈತ ಹೋರಾಟಗಾರ ವೀರಸಂಗಯ್ಯ, ತಾರಾ ರಾವ್, ಸೀತಾರಾಮ್ ಗುಂಡಪ್ಪ, ತಾಹೀರ್ ಹುಸೇನ್, ಬಸವರಾಜ್ ಕೌತಾಳ್, ಬಾಲಕೃಷ್ಣಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...