HomeಅಂಕಣಗಳುKarnataka against SIRSIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

- Advertisement -
- Advertisement -

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್ ಜಾರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮತ್ತು ಮತದಾರರ ಹಕ್ಕುಗಳ ರಕ್ಷಣೆಗಾಗಿ ರಾಜ್ಯಾದ್ಯಂತ ಅತ್ಯಂತ ವಿಸ್ತಾರವಾದ ಚಳವಳಿ ರೂಪಿಸಲು ತೀರ್ಮಾನಿಸಲಾಗಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯ ನಾಯಕರಾದ ನೂರ್ ಶ್ರೀಧರ್ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗವು ಸಾರ್ವಜನಿಕರ ಯಾವುದೇ ಮನವಿಗಳಿಗೆ ಬೆಲೆ ಕೊಡದೆ ಸರ್ವಾಧಿಕಾರಿಯಂತೆ ‘ಎಸ್‌ಐಆರ್’ (SIR) ವ್ಯವಸ್ಥೆಯನ್ನು ಜಾರಿ ಮಾಡುತ್ತಿದೆ ಎಂದು ನೂರ್ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕ್ರಿಯೆಯಿಂದಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ಲಕ್ಷಾಂತರ ಅರ್ಹ ಮತದಾರರು ತಮ್ಮ ವೋಟಿಂಗ್ ಹಕ್ಕನ್ನೇ ಕಳೆದುಕೊಂಡಿದ್ದಾರೆ. ಈ ವ್ಯವಸ್ಥೆ ಅತ್ಯಂತ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಇದರ ವಿರುದ್ಧ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಆಯೋಗ ಮಾತ್ರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಹೊಸ ಸಾಫ್ಟ್‌ವೇರ್ ನಿಯಮಗಳಿಂದಾಗಿ ರಾಜ್ಯದ ಒಂದು ಕೋಟಿಗೂ ಅಧಿಕ ಮಂದಿ ವೋಟಿಂಗ್ ಹಕ್ಕಿನಿಂದ ವಂಚಿತರಾಗುವ ಸ್ಪಷ್ಟ ಮುನ್ಸೂಚನೆಗಳು ಕಾಣಿಸುತ್ತಿವೆ. ವಿಶೇಷವಾಗಿ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಅನಕ್ಷರಸ್ಥರಿಗೆ ಇದರಿಂದ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ‘ತಾರ್ಕಿಕ ವ್ಯತ್ಯಾಸ’ (Logical Discrepancy) ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುತ್ತಿದ್ದು, ಅಲ್ಲಿಗಿಂತಲೂ ಕಠಿಣ ನಿಯಮಗಳನ್ನು ಇಲ್ಲಿ ಹೇರಲಾಗುತ್ತಿದೆ. ಇದರ ಪರಿಣಾಮವಾಗಿ ಮುಂದಿನ ತಿಂಗಳೇ ಕೋಟ್ಯಂತರ ಜನರಿಗೆ ನೋಟಿಸ್ ಬರಲಿದ್ದು, ದಾಖಲೆಗಳನ್ನು ಒದಗಿಸಲಾಗದೆ ಬಡವರು ತತ್ತರಿಸುವ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಮತ ಕಾವಲು ಸಮಿತಿಯ 5 ಪ್ರಮುಖ ಕಾರ್ಯಸೂಚಿಗಳು:

ಈ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ರಚನೆಯಾಗಿರುವ ‘ನಾಗರಿಕ ಮತ ಕಾವಲು ಸಮಿತಿ’ಯು ಐದು ಪ್ರಮುಖ ಕಾರ್ಯಸೂಚಿಗಳೊಂದಿಗೆ ಕೆಲಸ ಮಾಡಲಿದೆ:

  1. SIR ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ದಿನನಿತ್ಯದ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಿ ಅಧಿಕಾರಿಗಳು ಹಾಗೂ ಮಾಧ್ಯಮಗಳ ಗಮನಕ್ಕೆ ತರುವುದು.
  2. ಜನರ ಗೊಂದಲಗಳನ್ನು ಪರಿಹರಿಸಿ ಸೂಕ್ತ ರೀತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನೆರವಾಗುವುದು.
  3. ಸರ್ಕಾರ ಘೋಷಿಸಿರುವ ಸಹಾಯವಾಣಿ ಮತ್ತು ಶಾಶ್ವತ ವಾಸಸ್ಥಳ ದೃಢೀಕರಣ ಪತ್ರ ವಿತರಿಸುವ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನಿಗಾವಹಿಸುವುದು.
  4. ಪ್ರತಿ ಬೂತ್ ಮಟ್ಟದಲ್ಲೂ ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಿ, ನೋಟಿಸ್ ಪಡೆದವರಿಗೆ ನೆರವಾಗುವುದು ಹಾಗೂ ಪಟ್ಟಿಯಿಂದ ಕೈಬಿಡಲಾದ ಮತದಾರರನ್ನು ಸಂಘಟಿಸಿ ಮರು-ಸೇರ್ಪಡೆಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವುದು.
  5. ಅರ್ಹ ಮತದಾರರ ರಕ್ಷಣೆಗಾಗಿ ತಕ್ಷಣವೇ ‘ವಿಶೇಷ ಗ್ರಾಮ ಅಥವಾ ವಾರ್ಡ್ ಸಭೆ’ಗಳನ್ನು ಕರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವುದು.

ಈ ಎಲ್ಲ ಅಂಶಗಳ ಯಶಸ್ವಿ ಅನುಷ್ಠಾನಕ್ಕಾಗಿ ಜುಲೈ 8 ರಿಂದ 15 ರವರೆಗೆ ರಾಜ್ಯಾದ್ಯಂತ ಬೂತ್ ಮಟ್ಟದವರೆಗೂ ಸರಣಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ಈ ಮಹತ್ವದ ‘ಮತ ಕಾವಲು ಅಭಿಯಾನ’ದಲ್ಲಿ ರಾಜ್ಯದ ಎಲ್ಲ ಜವಾಬ್ದಾರಿಯುತ ನಾಗರಿಕರು, ವಿಶೇಷವಾಗಿ ಯುವಕ-ಯುವತಿಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಭಿಯಾನದಲ್ಲಿ ಕೈಜೋಡಿಸಲು ಇಚ್ಛಿಸುವರು 96060 87560 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಭಾಗಿಯಾಗಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ರೈತ ಹೋರಾಟಗಾರ ವೀರಸಂಗಯ್ಯ, ತಾರಾ ರಾವ್, ಸೀತಾರಾಮ್ ಗುಂಡಪ್ಪ, ತಾಹೀರ್ ಹುಸೇನ್, ಬಸವರಾಜ್ ಕೌತಾಳ್, ಬಾಲಕೃಷ್ಣಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...