Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...