Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...