Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...