Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...