Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...