Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...