Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...