Homeಮುಖಪುಟಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ...

ಭಾರತೀಯರ ಪಾಲಿಗೆ ಮತ್ತೊಂದು ಮರಣಶಾಸನ ಪೌರತ್ವ ತಿದ್ದುಪಡಿ ಕಾಯ್ದೆ…

- Advertisement -
- Advertisement -

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ತೀವ್ರಗೊಳ್ಳುತ್ತಿದೆ. ಮುಸ್ಲಿಮರು, ಆದಿವಾಸಿಗಳು, ನಿರಾಶ್ರಿತರು ಕಾಯ್ದೆಯಿಂದ ಹೊರಗುಳಿಯುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಂವಿಧಾನದ ಆರ್ಟಿಕಲ್ 14, 15 ಮತ್ತು 21ರಡಿ ಜಾತಿ, ಧರ್ಮ, ಮತ, ಲಿಂಗ, ವರ್ಣ ಮತ್ತು ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂಬ ಮೂಲ ಆಶಯಗಳನ್ನು ಪೌರತ್ವ ಕಾಯ್ದೆಯಲ್ಲಿ ಉಲ್ಲಂಘಿಸಿರುವುದು ಸ್ಪಷ್ಟ. ಇದನ್ನೇ ಎಲ್ಲರೂ ಬೊಟ್ಟು ಮಾಡುತ್ತಿರುವುದು ಕೂಡ. ಪೌರತ್ವ ತಿದ್ದುಪಡಿ ಕಾಯ್ದೆ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿಶ್ವ ಸಂಸ್ಥೆಯೂ ಕೂಡ ಅಭಿಪ್ರಾಯಪಟ್ಟಿರುವುದನ್ನು ಗಮನಿಸಿದರೆ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು.

ಪೌರತ್ವ ತಿದ್ದುಪಡಿ ಕಾಯ್ದೆ 2019ರಲ್ಲಿ 2014 ರ ಒಳಗೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ, ಜೈನ, ಪಾರ್ಸಿ, ಸಿಖ್, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ ಧರ್ಮದವರು ಭಾರತದ ಪೌರತ್ವ ಪಡೆಯಲು ಅರ್ಹರು ಎಂಬ ನಿಯಮ ವಿವಾದದ ಕಿಡಿಹೊತ್ತಿಕೊಳ್ಳಲು ಕಾರಣವಾಗಿದೆ. ಈ ನೂತನ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯದ ಹೆಸರಿಲ್ಲ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧ ಮತ್ತು ಸಂವಿಧಾನಬಾಹಿರ ಎಂಬ ಕೂಗು ಎದ್ದಿದೆ. ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ತಂತ್ರ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷಗಳು, ನಾಗರಿಕ ಸಂಘಟನೆಗಳು, ಚಿಂತಕರು, ಸಾಮಾಜಿಕ ಹೋರಾಟಗಾರು ಮತ್ತು ಮಾನವ ಹಕ್ಕುಗಳ ಪರ ನಿಲುವು ಹೊಂದಿರುವವರು ಎತ್ತಿರುವ ಈ ಪ್ರಶ್ನೆಗಳು ಸಮರ್ಥನೀಯವೂ, ಕೇಳಿಕೊಳ್ಳಲೇಬೇಕಾದವೂ ಆಗಿವೆ.

ಅಸ್ಸಾಂ ರಾಜ್ಯದಲ್ಲಿ ನಡೆದ ಹೋರಾಟದ ಫಲವಾಗಿ 1985 ಆಗಸ್ಟ್ 15ರಂದು ಭಾರತ ಸರ್ಕಾರ ಮತ್ತು ಅಸ್ಸಾಂ ಹೋರಾಟಗಾರರ ನಡುವೆ ಒಪ್ಪಂದವಾಯಿತು. ಆ ಒಪ್ಪಂದ ಪ್ರಕಾರ 1971 ಮಾರ್ಚ್ 24ರ ಮಧ್ಯರಾತ್ರಿ ಒಳಗೆ ಭಾರತಕ್ಕೆ ವಲಸೆ ಬಂದ ಎಲ್ಲಾ ಜನರಿಗೂ ಭಾರತದ ಪೌರತ್ವ ನೀಡಲಾಯಿತು. ಅದರ ಆಧಾರದ ಮೇಲೆ ಎರಡು ಬಾರಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ನಡೆಯಿತು. ಪೌರತ್ವ ನೋಂದಣಿಗೆ ಜನನ ಪ್ರಮಾಣ ಪತ್ರ, ಭೂಮಿ ಮತ್ತು ಹಿಡುವಳಿ ಪತ್ರ, ಪಾಸ್ ಪೋರ್ಟ್, ಮಂಡಳಿ ಅಥವಾ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳು, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನೀಡಿರುವ ದಾಖಲೆಗಳು – ಹೀಗೆ 14 ಪ್ರಮಾಣಿಕೃತ ದಾಖಲೆಗಳನ್ನು ಪೌರತ್ವ ನೋಂದಣಿ ಅಧಿಕಾರಿಗಳ ಮುಂದೆ ಹಾಜರುಪಡಿಸಬೇಕಾಗಿದೆ. ಎಲ್ಲಾ ನಾಗರಿಕರು ಈ ಹದಿನಾಲ್ಕು ದಾಖಲೆಗಳನ್ನು ಹಾಜರುಪಡಿಸಲೇ ಬೇಕು.

ಆದರೆ ಭಾರತದಲ್ಲಿ ವಾಸಿಸುವ ಅಲೆಮಾರಿಗಳು, ಗುಡ್ಡಗಾಡು ಆದಿವಾಸಿಗಳು, ಬುಡಕಟ್ಟು ಜನ, ಬಡವರು, ಅನಕ್ಷರಸ್ಥರು ಸೇರಿದಂತೆ ಹಲವು ಜನವರ್ಗ ಇಂತಹ ಯಾವುದೇ ದಾಖಲೆಗಳನ್ನು ಹೊಂದಿರಲು ಸಾಧ್ಯವಿಲ್ಲ. ಕೊಟ್ಯಂತರ ಮಂದಿಗೆ ಮನೆಯೂ ಇಲ್ಲ, ಭೂಮಿಯೂ ಇಲ್ಲ. ಬಹುತೇಕರು ಓದಿಯೇ ಇಲ್ಲ, ಓದಿದವರ ದಾಖಲೆಗಳು ಇಲ್ಲ. ಕೆಲವರಂತೂ ಗ್ರಾಮಗಳಿಂದಲೇ ಹೊರಗೆ ಹೋಗುವುದಿಲ್ಲ ಅಂದರೆ ಇನ್ನು ಹೊರದೇಶಗಳಿಗೆ ಹೋಗಲು ಸಾಧ್ಯವೇ? ಇದರ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಿದಂತೆ ಕಾಣುತ್ತಿಲ್ಲ. ಸಂವಿಧಾನವೇ ಹೇಳುವಂತೆ ಭಾರತ ಗಡಿಯೊಳಗಿನ ಯಾವುದೇ ಪ್ರದೇಶದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಭಾರತದ ಪೌರತ್ವ ಪಡೆಯಲು ಅರ್ಹ ಮತ್ತು ನೈಸರ್ಗಿಕವಾಗಿಯೇ ಪೌರತ್ವ ದೊರೆಯುತ್ತದೆ. ಆದರೆ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದಾಖಲೆಗಳು ಅಗತ್ಯವೆಂದು ಕಡ್ಡಾಯಗೊಳಿಸಿದರೆ ದಾಖಲೆಗಳೇ ಇಲ್ಲದವರು ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಶತಶತಮಾನಗಳಿಂದ ನೋವುಂಡು ಬಂದವರು ಇಲ್ಲಿನ ಮೂಲನಿವಾಸಿಗಳು. ಮೂಲನಿವಾಸಿಗಳನ್ನು ಪೌರತ್ವದಿಂದ ಹೊರಗಿಡಲು ಯಾವುದೇ ಸರ್ಕಾರಗಳಿಗೂ ಹಕ್ಕಿಲ್ಲ. ಪೌರತ್ವ ನೋಂದಣಿ ಹೆಸರಿನಲ್ಲಿ ಇಡೀ ದೇಶದ ಜನರನ್ನು ಮತ್ತೆ ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವುದು ಸರಿಯಾದ ಕ್ರಮವಲ್ಲ. ನೋಟು ರದ್ದು ಮಾಡಿದ ಮೇಲೆ ಕ್ಯೂನಲ್ಲಿ ನಿಂತು 100ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡರು. ಈಗ ಮತ್ತೊಮ್ಮೆ ಜನರು ಕೆಲಸಗಳನ್ನು ಬಿಟ್ಟು ಕ್ಯೂನಲ್ಲಿ ನಿಲ್ಲಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಜನರು ನೆಮ್ಮದಿಯಿಂದ ಜೀವನ ನಡೆಸಲು ಕಷ್ಟಸಾಧ್ಯವಾಗುತ್ತದೆ. ದಿನಗೂಲಿ, ಹೊಲಗೆಲಸ, ಮಕ್ಕಳು, ವೃದ್ಧರು ಎಲ್ಲರನ್ನೂ ಬಿಟ್ಟು ಜನ ಪೌರತ್ವ ಸಾಬೀತುಪಡಿಸಲು ಇನ್ನಿಲ್ಲದ ಸಂಕಷ್ಟಕ್ಕೆ ಗುರಿಯಾಗುವಂತಹ ಸನ್ನಿವೇಶ ಉದ್ಭವಿಸಲಿದೆ. ಇಂತಹ ಅನಾನುಕೂಲ ವಾತಾವರಣವನ್ನು ಯಾರೂ ಕೂಡ ಸೃಷ್ಟಿಸುವುದು ಒಳ್ಳೆಯ ನಡೆಯಲ್ಲ.

ಪೌರತ್ವ ಹುಟ್ಟಿನೊಂದಿಗೇ ಬರಬೇಕು. ಅದು ಸಂವಿಧಾನದ ಪ್ರಮುಖ ಆಶಯ. ಆತನಿಗೆ ದಾಖಲೆಗಳು ಇರಲಿ ಬಿಡಲಿ ಪೌರತ್ವ ನೀಡಲು ಸರ್ಕಾರ ಮುಂದೆ ಬರಬೇಕು. ಈಗಾಗಲೇ ಎಲ್ಲರಿಗೂ ಒಂದು ಸಂಖ್ಯೆ ಬೇಕು ಎಂಬ ಕಾರಣಕ್ಕಾಗಿ ಆಧಾರ್ ಕಡ್ಡಾಯಗೊಳಿಸಿದೆ. ಸರ್ಕಾರದ ಬಳಿ ಈ ಮಾಹಿತಿಯೂ ದಾಸ್ತಾನಿದೆ. ಹಾಗಾಗಿ ಜನರು ಮತ್ತೆ ಪೌರತ್ವ ನೋಂದಣಿ ಹೆಸರಿನಲ್ಲಿ ದಾಖಲೆಗಳಿಗಾಗಿ ಅಲೆಯುವಂತೆ ಮಾಡುವುದು ತಪ್ಪಬೇಕು. ಇದು ಸಾಧ್ಯವಾದರೆ ಜನತೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಸಾಧ್ಯವಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ವಯಕ್ತಿಕವಾದವು. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...