HomeUncategorizedಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

ಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

- Advertisement -
- Advertisement -

ಬಹುವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆ ಲಭಿಸಿ, ರಾಷ್ಟ್ರಪತಿಗಳ ಅಂಕಿತವೂ ಬೀಳುತ್ತಿದ್ದಂತೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರ ಹಲವು ದೇಶಗಳ ರಾಜತಾಂತ್ರಿಕ ಒತ್ತಡಕ್ಕೆ ಸಿಲುಕುತ್ತಿದೆ. ಮುಖ್ಯವಾಗಿ ಅಮೆರಿಕಾ ಸಂಸತ್ ಸದಸ್ಯರು ಭಾರತ ಸರ್ಕಾರದ ಪೌರತ್ವ ತಿದ್ದುಪಡಿಯನ್ನು ತೀವ್ರವಾಗಿ ಖಂಡಿಸಿರುವುದು ಮೋದಿ ಸರ್ಕಾರವನ್ನು ಕಂಗೆಡಿಸಿರುವಂತೆ ಕಾಣುತ್ತಿದೆ. ಹಾಗಾಗಿ ಅಲ್ಲಿನ ಸಂಸದರಿಗೆ ನೂತನ ಮಸೂದೆಯ ಬಗ್ಗೆ ಮನವರಿಕೆ ಮಾಡಿಕೊಡಲು ಡಿಸೆಂಬರ್ 18ರಂದು ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಷಿಂಗ್ಟನ್‍ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವತಃ ಭಾರತ ವಿದೇಶಾಂಗ ಸಚಿವಾಲಯವೇ ತನ್ನ ಹೇಳಿಕೆಯೊಂದರಲ್ಲಿ, ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕಾ ಸಂಸತ್ತಿನ ವಿದೇಶಾಂಗ ವ್ಯವಹಾರ ಸಮಿತಿಯು, “ಪೌರತ್ವ ನಿರ್ಧರಣೆಗೆ ಧಾರ್ಮಿಕ ಮಾನದಂಡವನ್ನು ಬಳಸುವ” ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಿದೆ ಎಂದು ಉಲ್ಲೇಖಿಸಿರುವುದು ನಮ್ಮ ಗಮನಕ್ಕೆ ಬಂದಿದೆ’ ಎಂದು ತಿಳಿಸಿದೆ.

ಮಸೂದೆ ತಿದ್ದುಪಡಿಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯುತ್ತಿದ್ದಂತೆಯೇ ಅಮೆರಿಕಾ ಸಂಸತ್ ಸದಸ್ಯರಾದ ಆಂಡ್ರೆ ಕಾರ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪೌರತ್ವ ತಿದ್ದುಪಡಿಯನ್ನು `ಕರಾಳ’ ಕಾಯ್ದೆ ಎಂದು ಕರೆದಿದ್ದ ಅವರು, ಈ ಪ್ರಯತ್ನದಿಂದಾಗಿ `ಭಾರತದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸುವ ಹುನ್ನಾರ ಅಡಗಿದೆ’ ಎಂದಿದ್ದರು.

ಇದಕ್ಕೂ ಮುನ್ನ, ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೆಯೇ ಅಮೆರಿಕಾದ ಅರೆಸರ್ಕಾರಿ ಸ್ವಾಯತ್ತ ಸಂಸ್ಥೆಯಾದ `ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ’ವು ಮೋದಿ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿ, “ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಿಂದ ವಲಸೆ ಬರುವ ನಿರ್ಗತಿಕರಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪೌರತ್ವ ನೀಡುವ ಕೋಮು ಭಾವನೆಯ ಈ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೆ ತಂದಿದ್ದೇ ಆದಲ್ಲಿ ಗೃಹಮಂತ್ರಿ ಅಮಿತ್ ಶಾ ಹಾಗೂ ಇತರೆ ನಾಯಕರ ಮೇಲೆ ಅಮೆರಿಕಾ ಸರ್ಕಾರ ನಿರ್ಬಂಧ ಹೇರಬೇಕು” ಎಂದು ಟ್ರಂಪ್ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡಿದ್ದ ಭಾರತೀಯ ವಿದೇಶಾಂಗ ಸಚಿವಾಲಯ ಅಮೆರಿಕಾ ಸಂಸತ್ ಸದಸ್ಯರ ಜೊತೆ ಮಾತುಕತೆಗೆ ಮುಂದಾಗಿತ್ತು.

ಆದಾಗ್ಯೂ ಅಮೆರಿಕಾ ಸಂಸತ್ ಸದಸ್ಯರು ಕಾಯ್ದೆಯನ್ನು ಸಂಸತ್ತಿನಲ್ಲೇ ಟೀಕಿಸುತ್ತಿರುವುದರಿಂದ ಆ ಸರ್ಕಾರ ಭಾರತದ ಮೇಲೆ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆಯನ್ನು ಮನಗಂಡು ಸ್ವತಃ ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರು ತುರ್ತು ಅಮೆರಿಕಾ ಭೇಟಿಗೆ ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಂದಹಾಗೆ, ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಭಾರತ ಸರ್ಕಾರದ ಕ್ರಮವನ್ನು ಟೀಕಿಸಿ ಅಮೆರಿಕಾ ಸಂಸತ್ತಿನಲ್ಲಿ ಖಂಡನಾ ನಿರ್ಣಯವೊಂದನ್ನು ಮಂಡಿಸಲಾಗಿತ್ತು. ಹಲವು ದಶಕಗಳ ಕಾಶ್ಮೀರ ವಿವಾದದ ಇತಿಹಾಸದಲ್ಲಿ ಅಮೆರಿಕಾ ಸಂಸತ್ತು ಭಾರತವನ್ನು ಖಂಡಿಸಿ ನಿರ್ಣಯ ಮಂಡಿಸಿದ್ದು ಇದೇ ಮೊದಲು. ಈಗ ಪೌರತ್ವ ಮಸೂದೆಗೂ ಅಮೆರಿಕಾ ಸಂಸತ್ತು ಅಷ್ಟೇ ಟೀಕಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಮೋದಿ ಸರ್ಕಾರವನ್ನು ರಾಜತಾಂತ್ರಿಕ ಒತ್ತಡಕ್ಕೆ ಸಿಲುಕಿಸಿದೆ.

ಇತ್ತ ಮಸೂದೆಯನ್ನು ಮಂಡಿಸುತ್ತ ಲೋಕಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ “ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾಗಿ ನಿರ್ವಸತಿಗರಾಗಿ ಬರುವ ವಲಸಿಗರಿಗೆ ಈ ಕಾಯ್ದೆ ಆಶ್ರಯ ಒದಗಿಸಲಿದೆ” ಎಂದು ಹೇಳಿದ್ದ ಹೇಳಿಕೆಗೆ ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರಗಳು ಅಸಮಾಧಾನ ವ್ಯಕ್ತಪಡಿಸಿವೆ. ಇವೆರಡೂ ಇತ್ತೀಚಿನ ದಿನಗಳಲ್ಲಿ ಭಾರತದ ಮಿತ್ರರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಿದ್ದವು.

ಇಂಡಿಯಾ ಟುಡೆ ಟೀವಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಅಪ್ಘಾನಿಸ್ತಾನದ ರಾಯಭಾರಿ ತಹೀರ್ ಖಾದ್ರಿಯವರು “ಅಪ್ಘಾನಿಸ್ತಾನವನ್ನು ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರೋದು ಸರಿಯಲ್ಲ. ಘನಿಯವರ ಸರ್ಕಾರವು ಅಪ್ಘಾನಿಸ್ತಾನದ ಅಲ್ಪಸಂಖ್ಯಾತರ ಪ್ರಾತಿನಿಧಿತ್ವ ಮತ್ತು ಹಕ್ಕುಗಳ ರಕ್ಷಣೆಗೆ ಪೂರ್ಣಪ್ರಮಾಣದಲ್ಲಿ ಶ್ರಮಿಸುತ್ತಿದೆ” ಎಂದಿದ್ದಾರೆ. ಇನ್ನು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮಿನ್ ಅವರು ಗುರುವಾರ ನವದೆಹಲಿಗೆ ನೀಡಬೇಕಿದ್ದ ಭೇಟಿಯನ್ನು ಕೊನೇ ಕ್ಷಣದಲ್ಲಿ ರದ್ದು ಪಡಿಸಿರುವುದು ಭಾರತವು ಬಾಂಗ್ಲಾದೇಶದ ಮೇಲೆ ಅಲ್ಪಸಂಖ್ಯಾತರಿಗೆ ಕಿರುಕುಳು ನೀಡುತ್ತಿರುವ ಆರೋಪ ಹೊರಿಸಿದ ಕಾರಣಕ್ಕೆ ಎನ್ನಲಾಗುತ್ತಿದೆ.

ಅತ್ತ, ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರಿಂದ ಜಪಾನ್ ಪ್ರಧಾನಿ ಶಿಂಜೋ ಅಬೆಯವರು ಕೂಡಾ ಭಾರತದ ಪ್ರವಾಸವನ್ನು ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...