HomeUncategorizedಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

ಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

- Advertisement -
- Advertisement -

ಬಹುವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆ ಲಭಿಸಿ, ರಾಷ್ಟ್ರಪತಿಗಳ ಅಂಕಿತವೂ ಬೀಳುತ್ತಿದ್ದಂತೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರ ಹಲವು ದೇಶಗಳ ರಾಜತಾಂತ್ರಿಕ ಒತ್ತಡಕ್ಕೆ ಸಿಲುಕುತ್ತಿದೆ. ಮುಖ್ಯವಾಗಿ ಅಮೆರಿಕಾ ಸಂಸತ್ ಸದಸ್ಯರು ಭಾರತ ಸರ್ಕಾರದ ಪೌರತ್ವ ತಿದ್ದುಪಡಿಯನ್ನು ತೀವ್ರವಾಗಿ ಖಂಡಿಸಿರುವುದು ಮೋದಿ ಸರ್ಕಾರವನ್ನು ಕಂಗೆಡಿಸಿರುವಂತೆ ಕಾಣುತ್ತಿದೆ. ಹಾಗಾಗಿ ಅಲ್ಲಿನ ಸಂಸದರಿಗೆ ನೂತನ ಮಸೂದೆಯ ಬಗ್ಗೆ ಮನವರಿಕೆ ಮಾಡಿಕೊಡಲು ಡಿಸೆಂಬರ್ 18ರಂದು ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಷಿಂಗ್ಟನ್‍ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವತಃ ಭಾರತ ವಿದೇಶಾಂಗ ಸಚಿವಾಲಯವೇ ತನ್ನ ಹೇಳಿಕೆಯೊಂದರಲ್ಲಿ, ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕಾ ಸಂಸತ್ತಿನ ವಿದೇಶಾಂಗ ವ್ಯವಹಾರ ಸಮಿತಿಯು, “ಪೌರತ್ವ ನಿರ್ಧರಣೆಗೆ ಧಾರ್ಮಿಕ ಮಾನದಂಡವನ್ನು ಬಳಸುವ” ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಿದೆ ಎಂದು ಉಲ್ಲೇಖಿಸಿರುವುದು ನಮ್ಮ ಗಮನಕ್ಕೆ ಬಂದಿದೆ’ ಎಂದು ತಿಳಿಸಿದೆ.

ಮಸೂದೆ ತಿದ್ದುಪಡಿಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯುತ್ತಿದ್ದಂತೆಯೇ ಅಮೆರಿಕಾ ಸಂಸತ್ ಸದಸ್ಯರಾದ ಆಂಡ್ರೆ ಕಾರ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪೌರತ್ವ ತಿದ್ದುಪಡಿಯನ್ನು `ಕರಾಳ’ ಕಾಯ್ದೆ ಎಂದು ಕರೆದಿದ್ದ ಅವರು, ಈ ಪ್ರಯತ್ನದಿಂದಾಗಿ `ಭಾರತದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸುವ ಹುನ್ನಾರ ಅಡಗಿದೆ’ ಎಂದಿದ್ದರು.

ಇದಕ್ಕೂ ಮುನ್ನ, ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೆಯೇ ಅಮೆರಿಕಾದ ಅರೆಸರ್ಕಾರಿ ಸ್ವಾಯತ್ತ ಸಂಸ್ಥೆಯಾದ `ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ’ವು ಮೋದಿ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿ, “ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಿಂದ ವಲಸೆ ಬರುವ ನಿರ್ಗತಿಕರಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪೌರತ್ವ ನೀಡುವ ಕೋಮು ಭಾವನೆಯ ಈ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೆ ತಂದಿದ್ದೇ ಆದಲ್ಲಿ ಗೃಹಮಂತ್ರಿ ಅಮಿತ್ ಶಾ ಹಾಗೂ ಇತರೆ ನಾಯಕರ ಮೇಲೆ ಅಮೆರಿಕಾ ಸರ್ಕಾರ ನಿರ್ಬಂಧ ಹೇರಬೇಕು” ಎಂದು ಟ್ರಂಪ್ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡಿದ್ದ ಭಾರತೀಯ ವಿದೇಶಾಂಗ ಸಚಿವಾಲಯ ಅಮೆರಿಕಾ ಸಂಸತ್ ಸದಸ್ಯರ ಜೊತೆ ಮಾತುಕತೆಗೆ ಮುಂದಾಗಿತ್ತು.

ಆದಾಗ್ಯೂ ಅಮೆರಿಕಾ ಸಂಸತ್ ಸದಸ್ಯರು ಕಾಯ್ದೆಯನ್ನು ಸಂಸತ್ತಿನಲ್ಲೇ ಟೀಕಿಸುತ್ತಿರುವುದರಿಂದ ಆ ಸರ್ಕಾರ ಭಾರತದ ಮೇಲೆ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆಯನ್ನು ಮನಗಂಡು ಸ್ವತಃ ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರು ತುರ್ತು ಅಮೆರಿಕಾ ಭೇಟಿಗೆ ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಂದಹಾಗೆ, ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಭಾರತ ಸರ್ಕಾರದ ಕ್ರಮವನ್ನು ಟೀಕಿಸಿ ಅಮೆರಿಕಾ ಸಂಸತ್ತಿನಲ್ಲಿ ಖಂಡನಾ ನಿರ್ಣಯವೊಂದನ್ನು ಮಂಡಿಸಲಾಗಿತ್ತು. ಹಲವು ದಶಕಗಳ ಕಾಶ್ಮೀರ ವಿವಾದದ ಇತಿಹಾಸದಲ್ಲಿ ಅಮೆರಿಕಾ ಸಂಸತ್ತು ಭಾರತವನ್ನು ಖಂಡಿಸಿ ನಿರ್ಣಯ ಮಂಡಿಸಿದ್ದು ಇದೇ ಮೊದಲು. ಈಗ ಪೌರತ್ವ ಮಸೂದೆಗೂ ಅಮೆರಿಕಾ ಸಂಸತ್ತು ಅಷ್ಟೇ ಟೀಕಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಮೋದಿ ಸರ್ಕಾರವನ್ನು ರಾಜತಾಂತ್ರಿಕ ಒತ್ತಡಕ್ಕೆ ಸಿಲುಕಿಸಿದೆ.

ಇತ್ತ ಮಸೂದೆಯನ್ನು ಮಂಡಿಸುತ್ತ ಲೋಕಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ “ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾಗಿ ನಿರ್ವಸತಿಗರಾಗಿ ಬರುವ ವಲಸಿಗರಿಗೆ ಈ ಕಾಯ್ದೆ ಆಶ್ರಯ ಒದಗಿಸಲಿದೆ” ಎಂದು ಹೇಳಿದ್ದ ಹೇಳಿಕೆಗೆ ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರಗಳು ಅಸಮಾಧಾನ ವ್ಯಕ್ತಪಡಿಸಿವೆ. ಇವೆರಡೂ ಇತ್ತೀಚಿನ ದಿನಗಳಲ್ಲಿ ಭಾರತದ ಮಿತ್ರರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಿದ್ದವು.

ಇಂಡಿಯಾ ಟುಡೆ ಟೀವಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಅಪ್ಘಾನಿಸ್ತಾನದ ರಾಯಭಾರಿ ತಹೀರ್ ಖಾದ್ರಿಯವರು “ಅಪ್ಘಾನಿಸ್ತಾನವನ್ನು ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರೋದು ಸರಿಯಲ್ಲ. ಘನಿಯವರ ಸರ್ಕಾರವು ಅಪ್ಘಾನಿಸ್ತಾನದ ಅಲ್ಪಸಂಖ್ಯಾತರ ಪ್ರಾತಿನಿಧಿತ್ವ ಮತ್ತು ಹಕ್ಕುಗಳ ರಕ್ಷಣೆಗೆ ಪೂರ್ಣಪ್ರಮಾಣದಲ್ಲಿ ಶ್ರಮಿಸುತ್ತಿದೆ” ಎಂದಿದ್ದಾರೆ. ಇನ್ನು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮಿನ್ ಅವರು ಗುರುವಾರ ನವದೆಹಲಿಗೆ ನೀಡಬೇಕಿದ್ದ ಭೇಟಿಯನ್ನು ಕೊನೇ ಕ್ಷಣದಲ್ಲಿ ರದ್ದು ಪಡಿಸಿರುವುದು ಭಾರತವು ಬಾಂಗ್ಲಾದೇಶದ ಮೇಲೆ ಅಲ್ಪಸಂಖ್ಯಾತರಿಗೆ ಕಿರುಕುಳು ನೀಡುತ್ತಿರುವ ಆರೋಪ ಹೊರಿಸಿದ ಕಾರಣಕ್ಕೆ ಎನ್ನಲಾಗುತ್ತಿದೆ.

ಅತ್ತ, ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರಿಂದ ಜಪಾನ್ ಪ್ರಧಾನಿ ಶಿಂಜೋ ಅಬೆಯವರು ಕೂಡಾ ಭಾರತದ ಪ್ರವಾಸವನ್ನು ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...