HomeUncategorizedಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

ಪೌರತ್ವ ಮಸೂದೆ: ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾದ ಬಹಿಷ್ಕಾರ!?

- Advertisement -
- Advertisement -

ಬಹುವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆ ಲಭಿಸಿ, ರಾಷ್ಟ್ರಪತಿಗಳ ಅಂಕಿತವೂ ಬೀಳುತ್ತಿದ್ದಂತೆ ಜಾಗತಿಕ ಮಟ್ಟದಲ್ಲಿ ಮೋದಿ ಸರ್ಕಾರ ಹಲವು ದೇಶಗಳ ರಾಜತಾಂತ್ರಿಕ ಒತ್ತಡಕ್ಕೆ ಸಿಲುಕುತ್ತಿದೆ. ಮುಖ್ಯವಾಗಿ ಅಮೆರಿಕಾ ಸಂಸತ್ ಸದಸ್ಯರು ಭಾರತ ಸರ್ಕಾರದ ಪೌರತ್ವ ತಿದ್ದುಪಡಿಯನ್ನು ತೀವ್ರವಾಗಿ ಖಂಡಿಸಿರುವುದು ಮೋದಿ ಸರ್ಕಾರವನ್ನು ಕಂಗೆಡಿಸಿರುವಂತೆ ಕಾಣುತ್ತಿದೆ. ಹಾಗಾಗಿ ಅಲ್ಲಿನ ಸಂಸದರಿಗೆ ನೂತನ ಮಸೂದೆಯ ಬಗ್ಗೆ ಮನವರಿಕೆ ಮಾಡಿಕೊಡಲು ಡಿಸೆಂಬರ್ 18ರಂದು ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಷಿಂಗ್ಟನ್‍ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವತಃ ಭಾರತ ವಿದೇಶಾಂಗ ಸಚಿವಾಲಯವೇ ತನ್ನ ಹೇಳಿಕೆಯೊಂದರಲ್ಲಿ, ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕಾ ಸಂಸತ್ತಿನ ವಿದೇಶಾಂಗ ವ್ಯವಹಾರ ಸಮಿತಿಯು, “ಪೌರತ್ವ ನಿರ್ಧರಣೆಗೆ ಧಾರ್ಮಿಕ ಮಾನದಂಡವನ್ನು ಬಳಸುವ” ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಿದೆ ಎಂದು ಉಲ್ಲೇಖಿಸಿರುವುದು ನಮ್ಮ ಗಮನಕ್ಕೆ ಬಂದಿದೆ’ ಎಂದು ತಿಳಿಸಿದೆ.

ಮಸೂದೆ ತಿದ್ದುಪಡಿಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯುತ್ತಿದ್ದಂತೆಯೇ ಅಮೆರಿಕಾ ಸಂಸತ್ ಸದಸ್ಯರಾದ ಆಂಡ್ರೆ ಕಾರ್ಸನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಪೌರತ್ವ ತಿದ್ದುಪಡಿಯನ್ನು `ಕರಾಳ’ ಕಾಯ್ದೆ ಎಂದು ಕರೆದಿದ್ದ ಅವರು, ಈ ಪ್ರಯತ್ನದಿಂದಾಗಿ `ಭಾರತದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸುವ ಹುನ್ನಾರ ಅಡಗಿದೆ’ ಎಂದಿದ್ದರು.

ಇದಕ್ಕೂ ಮುನ್ನ, ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೆಯೇ ಅಮೆರಿಕಾದ ಅರೆಸರ್ಕಾರಿ ಸ್ವಾಯತ್ತ ಸಂಸ್ಥೆಯಾದ `ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ’ವು ಮೋದಿ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿ, “ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಗಳಿಂದ ವಲಸೆ ಬರುವ ನಿರ್ಗತಿಕರಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪೌರತ್ವ ನೀಡುವ ಕೋಮು ಭಾವನೆಯ ಈ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೆ ತಂದಿದ್ದೇ ಆದಲ್ಲಿ ಗೃಹಮಂತ್ರಿ ಅಮಿತ್ ಶಾ ಹಾಗೂ ಇತರೆ ನಾಯಕರ ಮೇಲೆ ಅಮೆರಿಕಾ ಸರ್ಕಾರ ನಿರ್ಬಂಧ ಹೇರಬೇಕು” ಎಂದು ಟ್ರಂಪ್ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡಿದ್ದ ಭಾರತೀಯ ವಿದೇಶಾಂಗ ಸಚಿವಾಲಯ ಅಮೆರಿಕಾ ಸಂಸತ್ ಸದಸ್ಯರ ಜೊತೆ ಮಾತುಕತೆಗೆ ಮುಂದಾಗಿತ್ತು.

ಆದಾಗ್ಯೂ ಅಮೆರಿಕಾ ಸಂಸತ್ ಸದಸ್ಯರು ಕಾಯ್ದೆಯನ್ನು ಸಂಸತ್ತಿನಲ್ಲೇ ಟೀಕಿಸುತ್ತಿರುವುದರಿಂದ ಆ ಸರ್ಕಾರ ಭಾರತದ ಮೇಲೆ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆಯನ್ನು ಮನಗಂಡು ಸ್ವತಃ ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರು ತುರ್ತು ಅಮೆರಿಕಾ ಭೇಟಿಗೆ ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಂದಹಾಗೆ, ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದು ಮಾಡಿದ ಸಂದರ್ಭದಲ್ಲಿ ಭಾರತ ಸರ್ಕಾರದ ಕ್ರಮವನ್ನು ಟೀಕಿಸಿ ಅಮೆರಿಕಾ ಸಂಸತ್ತಿನಲ್ಲಿ ಖಂಡನಾ ನಿರ್ಣಯವೊಂದನ್ನು ಮಂಡಿಸಲಾಗಿತ್ತು. ಹಲವು ದಶಕಗಳ ಕಾಶ್ಮೀರ ವಿವಾದದ ಇತಿಹಾಸದಲ್ಲಿ ಅಮೆರಿಕಾ ಸಂಸತ್ತು ಭಾರತವನ್ನು ಖಂಡಿಸಿ ನಿರ್ಣಯ ಮಂಡಿಸಿದ್ದು ಇದೇ ಮೊದಲು. ಈಗ ಪೌರತ್ವ ಮಸೂದೆಗೂ ಅಮೆರಿಕಾ ಸಂಸತ್ತು ಅಷ್ಟೇ ಟೀಕಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಮೋದಿ ಸರ್ಕಾರವನ್ನು ರಾಜತಾಂತ್ರಿಕ ಒತ್ತಡಕ್ಕೆ ಸಿಲುಕಿಸಿದೆ.

ಇತ್ತ ಮಸೂದೆಯನ್ನು ಮಂಡಿಸುತ್ತ ಲೋಕಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ “ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾಗಿ ನಿರ್ವಸತಿಗರಾಗಿ ಬರುವ ವಲಸಿಗರಿಗೆ ಈ ಕಾಯ್ದೆ ಆಶ್ರಯ ಒದಗಿಸಲಿದೆ” ಎಂದು ಹೇಳಿದ್ದ ಹೇಳಿಕೆಗೆ ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರಗಳು ಅಸಮಾಧಾನ ವ್ಯಕ್ತಪಡಿಸಿವೆ. ಇವೆರಡೂ ಇತ್ತೀಚಿನ ದಿನಗಳಲ್ಲಿ ಭಾರತದ ಮಿತ್ರರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಿದ್ದವು.

ಇಂಡಿಯಾ ಟುಡೆ ಟೀವಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಅಪ್ಘಾನಿಸ್ತಾನದ ರಾಯಭಾರಿ ತಹೀರ್ ಖಾದ್ರಿಯವರು “ಅಪ್ಘಾನಿಸ್ತಾನವನ್ನು ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರೋದು ಸರಿಯಲ್ಲ. ಘನಿಯವರ ಸರ್ಕಾರವು ಅಪ್ಘಾನಿಸ್ತಾನದ ಅಲ್ಪಸಂಖ್ಯಾತರ ಪ್ರಾತಿನಿಧಿತ್ವ ಮತ್ತು ಹಕ್ಕುಗಳ ರಕ್ಷಣೆಗೆ ಪೂರ್ಣಪ್ರಮಾಣದಲ್ಲಿ ಶ್ರಮಿಸುತ್ತಿದೆ” ಎಂದಿದ್ದಾರೆ. ಇನ್ನು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮಿನ್ ಅವರು ಗುರುವಾರ ನವದೆಹಲಿಗೆ ನೀಡಬೇಕಿದ್ದ ಭೇಟಿಯನ್ನು ಕೊನೇ ಕ್ಷಣದಲ್ಲಿ ರದ್ದು ಪಡಿಸಿರುವುದು ಭಾರತವು ಬಾಂಗ್ಲಾದೇಶದ ಮೇಲೆ ಅಲ್ಪಸಂಖ್ಯಾತರಿಗೆ ಕಿರುಕುಳು ನೀಡುತ್ತಿರುವ ಆರೋಪ ಹೊರಿಸಿದ ಕಾರಣಕ್ಕೆ ಎನ್ನಲಾಗುತ್ತಿದೆ.

ಅತ್ತ, ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರಿಂದ ಜಪಾನ್ ಪ್ರಧಾನಿ ಶಿಂಜೋ ಅಬೆಯವರು ಕೂಡಾ ಭಾರತದ ಪ್ರವಾಸವನ್ನು ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...