HomeUncategorizedಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

ಪೌರತ್ವ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಗೆ: ಯಾರಿಗಿದೆ ಬಹುಮತ??

- Advertisement -
- Advertisement -

ಬಹುಚರ್ಚಿತ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿರುವುದು ಸರಿಯಷ್ಟೇ. ಆದರೆ ಅಸಲಿ ಅಗ್ನಿಪರೀಕ್ಷೆ ಇಂದು ರಾಜ್ಯಸಭೆಯಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆಯಲ್ಲಿ ಚರ್ಚೆಯ ನಂತರ ಬಹುಮತಕ್ಕೆ ಬೀಳುವ ಸಂಭವವಿದ್ದು ತೀವ್ರ ಕುತೂಹಲ ಕೆರಳಿಸಿದೆ.

ಮಸೂದೆಯನ್ನು ಮೇಲ್ಮನೆಯಲ್ಲಿ ಸಹ ಸರಾಗವಾಗಿ ಪಾಸುವ ಮಾಡುವ ಬಗ್ಗೆ ಪಕ್ಷಕ್ಕೆ ವಿಶ್ವಾಸವಿದೆ ಎಂದು ಆಡಳಿತಾರೂಡ BJP ಬಿಜೆಪಿ ಮೂಲಗಳು ತಿಳಿಸಿವೆ.

ಎನ್‌ಡಿಎಯು ಲೋಕಸಭೆಯಲ್ಲಿ ಅಗಾಧ ಬಹುಮತವನ್ನು ಹೊಂದಿತ್ತು. ಹಾಗಾಗಿಯೇ ಅಲ್ಲಿ ಮಸೂದೆಯ ಪರವಾಗಿ 311 ಮತಗಳನ್ನು ಪಡೆಯಲು ಸಾಧ್ಯವಾದರೆ ಅದರ ವಿರುದ್ಧ 80 ಮತಗಳಷ್ಟೇ ಬಿದ್ದಿದ್ದವು.

ಪ್ರಸ್ತುತ ರಾಜ್ಯಸಭೆಯಲ್ಲಿ 240 ಸದಸ್ಯರ ಬಲವಿದೆ. ಬಹುಮತ 121 ಆಗಿದೆ. ಎಐಎಡಿಎಂಕೆ, ಜನತಾದಳ-ಯುನೈಟೆಡ್ ಮತ್ತು ಅಕಾಲಿ ದಳದಂತಹ ಪಕ್ಷಗಳನ್ನು ಒಳಗೊಂಡ ಎನ್‌ಡಿಎ 116 ಸದಸ್ಯರನ್ನು ಹೊಂದಿದೆ ಮತ್ತು ಇತರ 14 ಜನರ ಬೆಂಬಲವನ್ನು ಅದು ನಿರೀಕ್ಷಿಸುತ್ತಿದೆ. ಆಗ ಅದರ ಸಂಖ್ಯೆ 130 ಆಗಲಿದ್ದು ಮಸೂದೆ ಮಂಡನೆ ಸಹಾಯಕವಾಗಲಿದೆ.

ಈ 14 ಜನ ಹೊರಗಿನ ಸದಸ್ಯರಲ್ಲಿ ಲೋಕಸಭೆಯಲ್ಲಿ ಮಸೂದೆಯ ಪರವಾಗಿ ಮತ ಚಲಾಯಿಸಿದ ಬಿಜೆಪಿಯ ಮಾಜಿ ಮಿತ್ರ ಶಿವಸೇನೆಯೂ ಮೂವರು ಸದಸ್ಯರನ್ನು ಒಳಗೊಂಡಿದೆ. ಆದರೆ ರಾಜ್ಯಸಭೆಯಲ್ಲಿ ಅದರ ಬೆಂಬಲ ಖಚಿತವಾಗಿಲ್ಲ ಎಂದು ಹೇಳಿದ್ದಾರೆ. ಶಿವಸೇನೆ ಬೆಂಬಲ ನೀಡದಿದ್ದರೂ ಸಹ ಬಿಜೆಪಿಗೆ 127 ಸದಸ್ಯರ ಬೆಂಬಲ ದೊರಕಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿಯ ಏಳು ಸದಸ್ಯರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್‌ಸಿಪಿಯಿಂದ ಇಬ್ಬರು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯಿಂದ ಇಬ್ಬರು ಮತ್ತು ಶಿವಸೇನೆಯ ಮೂವರು ಸದಸ್ಯರು ಬಿಜೆಪಿಗೆ ಹೊರಗಿನಿಂದ ಬೆಂಬಲ ಸೂಚಿಸಬಹುದಾದ 14 ರಾಜ್ಯಸಭಾ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಏನಿದು ಪೌರತ್ವ ತಿದ್ದುಪಡಿ ಮಸೂದೆ?

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) 64 ಸದಸ್ಯರನ್ನು ಹೊಂದಿದೆ. ಮತ್ತು ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ದಂತಹ ಇತರ 46 ರಾಜ್ಯಸಭಾ ಸದಸ್ಯರು ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಅವರ ಒಟ್ಟು ಸಂಖ್ಯೆ 110 ಆಗಲಿದೆ.

ಈ ನಡುವೆ ನಿತೀಶ್‌ ಕುಮಾರ್‌ರವರ ಜೆಡಿಯು ಮಸೂದೆಯನ್ನು ಬೆಂಬಲಿಸಬಾರದು ಎಂದು ಅದರ ಉಪಾಧ್ಯಕ್ಷರಾದ ಪ್ರಶಾಂತ್‌ ಕಿಶೋರ್‌ ಒತ್ತಾಯಿಸಿದ್ದರೆ. ಹಾಗಾಗಿ ಏನಾದರೂ ಸಂಭವಿಸಬಹುದೆಂಬ ನಿರೀಕ್ಷೆಯಲ್ಲಿ ವಿರೋಧ ಪಕ್ಷಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....