Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ - ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

ಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ – ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

- Advertisement -
- Advertisement -

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುತ್ತಿರುವ ಬಗ್ಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಸೋಮವಾರ ನಿರಾಶೆ ವ್ಯಕ್ತಪಡಿಸಿದ ನಂತರ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಕೆ ವರ್ಮಾ ಅವರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಷಯದ ಕುರಿತು ಮರು ಆಲೋಚಿಸುವಂತೆ ಮನವಿ ಮಾಡಿದ್ದಾರೆ.

“ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವುದರ ಕುರಿತು ಮರುಪರಿಶೀಲಿಸುವಂತೆ ನಾನು ನಿತೀಶ್ ಕುಮಾರ್ ಅವರನ್ನು ಕೋರುತ್ತೇನೆ. ಈ ಮಸೂದೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದೆ ಮತ್ತು ಜೆಡಿಯುನ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದೆ. ಗಾಂಧೀಜಿಯವರು ಇದನ್ನು ಬಲವಾಗಿ ನಿರಾಕರಿಸುತ್ತಿದ್ದರು ”ಎಂದು ವರ್ಮಾ ಟ್ವೀಟ್ ಮಾಡಿದ್ದಾರೆ.

ಜೆಡಿಯು ಲೋಕಸಭೆಯಲ್ಲಿ 16 ಸಂಸದರು ಮತ್ತು ರಾಜ್ಯಸಭೆಯಲ್ಲಿ 6 ಸಂಸದರನ್ನು ಹೊಂದಿದೆ.

ಇವರಿಬ್ಬರು ಸಹ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕುರಿತು ಬಹಿರಂಗ ವಿರೋಧ ವ್ಯಕ್ತಪಡಿಸಿರುವುದು ಪಕ್ಷವನ್ನು ಮುಜುಗರಕ್ಕೀಡುಮಾಡಿದೆ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಜಾತ್ಯತೀತತೆ ಮತ್ತು ಗಾಂಧಿವಾದಿ ಆದರ್ಶಗಳ ಹೆಸರಿನಲ್ಲಿ ಪ್ರತಿಜ್ಞೆ ತೆಗೆದುಕೊಂಡು ಈ ಅಸಂಗತವಾದ ಮಸೂದೆಯನ್ನು ಬೆಂಬಲಿಸುವುದು ದುರದೃಷ್ಟಕರ ಎಂದು ಪ್ರಶಾಂತ್‌ ಕಿಶೋರ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಜೆಡಿಯು ಸಿಎಬಿಯನ್ನು ಬೆಂಬಲಿಸುತ್ತಿರುವುದನ್ನು ನೋಡಿ ನಿರಾಶೆಗೊಂಡೆ. ಅದು ಧರ್ಮದ ಆಧಾರದ ಮೇಲೆ ಪೌರತ್ವದ ಹಕ್ಕನ್ನು ತಾರತಮ್ಯಗೊಳಿಸುತ್ತದೆ. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಮತ್ತು ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವವನ್ನು ಹೊಂದಿರುವವರಿಗೆ ಇದು ಹೊಂದಿಕೆಯಾಗುವುದಿಲ್ಲ ” ರಾಜಕೀಯ ವಿಶ್ಲೇಷಕ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ 15 ರಾಜ್ಯಗಳಿಗೂ ಹೆಚ್ಚು ಮತ್ತು ಶೇ.55% ಜನರು ವಾಸಿಸುವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಅವುಗಳಲ್ಲಿ ಎಷ್ಟು ಜನರೊಡೆನೆ ಎನ್‌ಆರ್‌ಸಿ ಜಾರಿಗೊಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

“ಅವರು ತಮ್ಮ ಹಾದಿಯನ್ನು ಒಮ್ಮೆ ಅಲ್ಲ ಮೂರು ಬಾರಿ ಬದಲಾಯಿಸಿದ್ದಾರೆ. ಟ್ರಿಪಲ್ ತಲಾಖ್, 370 ಮತ್ತು ಈಗ ಸಿಎಬಿಯ ವಿಷಯವಾಗಿರಲಿ, ಅವರು ಅದೇ ರೀತಿ ಮಾಡಿದರು. ಅವರು ಜನರ, ಮತದಾರರ ಮನಸ್ಸಿನಲ್ಲಿ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ. ಜೆಡಿಯು ಅವರು ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆಂದು ತೋರಿಸಿಕೊಳ್ಳುತ್ತದೆ. ಆದರೆ ಸಮಯ ಬಂದಾಗ ಅವರು ಪಾರ್ಲಿಮೆಂಟ್‌ನಿಂದ ಹೊರಗುಳಿಯುತ್ತಾರೆ ಅಥವಾ ಅವರನ್ನೇ ಬೆಂಬಲಿಸುತ್ತಾರೆ ”ಎಂದು ಎ ಎನ್ ಸಿನ್ಹಾ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಸ್ಟಡೀಸ್‌ನ ರಾಜಕೀಯ ವಿಶ್ಲೇಷಕ ಡಿ ಎಂ ದಿವಾಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...