Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ - ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

ಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ – ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

- Advertisement -
- Advertisement -

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುತ್ತಿರುವ ಬಗ್ಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಸೋಮವಾರ ನಿರಾಶೆ ವ್ಯಕ್ತಪಡಿಸಿದ ನಂತರ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಕೆ ವರ್ಮಾ ಅವರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಷಯದ ಕುರಿತು ಮರು ಆಲೋಚಿಸುವಂತೆ ಮನವಿ ಮಾಡಿದ್ದಾರೆ.

“ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವುದರ ಕುರಿತು ಮರುಪರಿಶೀಲಿಸುವಂತೆ ನಾನು ನಿತೀಶ್ ಕುಮಾರ್ ಅವರನ್ನು ಕೋರುತ್ತೇನೆ. ಈ ಮಸೂದೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದೆ ಮತ್ತು ಜೆಡಿಯುನ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದೆ. ಗಾಂಧೀಜಿಯವರು ಇದನ್ನು ಬಲವಾಗಿ ನಿರಾಕರಿಸುತ್ತಿದ್ದರು ”ಎಂದು ವರ್ಮಾ ಟ್ವೀಟ್ ಮಾಡಿದ್ದಾರೆ.

ಜೆಡಿಯು ಲೋಕಸಭೆಯಲ್ಲಿ 16 ಸಂಸದರು ಮತ್ತು ರಾಜ್ಯಸಭೆಯಲ್ಲಿ 6 ಸಂಸದರನ್ನು ಹೊಂದಿದೆ.

ಇವರಿಬ್ಬರು ಸಹ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕುರಿತು ಬಹಿರಂಗ ವಿರೋಧ ವ್ಯಕ್ತಪಡಿಸಿರುವುದು ಪಕ್ಷವನ್ನು ಮುಜುಗರಕ್ಕೀಡುಮಾಡಿದೆ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಜಾತ್ಯತೀತತೆ ಮತ್ತು ಗಾಂಧಿವಾದಿ ಆದರ್ಶಗಳ ಹೆಸರಿನಲ್ಲಿ ಪ್ರತಿಜ್ಞೆ ತೆಗೆದುಕೊಂಡು ಈ ಅಸಂಗತವಾದ ಮಸೂದೆಯನ್ನು ಬೆಂಬಲಿಸುವುದು ದುರದೃಷ್ಟಕರ ಎಂದು ಪ್ರಶಾಂತ್‌ ಕಿಶೋರ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಜೆಡಿಯು ಸಿಎಬಿಯನ್ನು ಬೆಂಬಲಿಸುತ್ತಿರುವುದನ್ನು ನೋಡಿ ನಿರಾಶೆಗೊಂಡೆ. ಅದು ಧರ್ಮದ ಆಧಾರದ ಮೇಲೆ ಪೌರತ್ವದ ಹಕ್ಕನ್ನು ತಾರತಮ್ಯಗೊಳಿಸುತ್ತದೆ. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಮತ್ತು ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವವನ್ನು ಹೊಂದಿರುವವರಿಗೆ ಇದು ಹೊಂದಿಕೆಯಾಗುವುದಿಲ್ಲ ” ರಾಜಕೀಯ ವಿಶ್ಲೇಷಕ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ 15 ರಾಜ್ಯಗಳಿಗೂ ಹೆಚ್ಚು ಮತ್ತು ಶೇ.55% ಜನರು ವಾಸಿಸುವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಅವುಗಳಲ್ಲಿ ಎಷ್ಟು ಜನರೊಡೆನೆ ಎನ್‌ಆರ್‌ಸಿ ಜಾರಿಗೊಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

“ಅವರು ತಮ್ಮ ಹಾದಿಯನ್ನು ಒಮ್ಮೆ ಅಲ್ಲ ಮೂರು ಬಾರಿ ಬದಲಾಯಿಸಿದ್ದಾರೆ. ಟ್ರಿಪಲ್ ತಲಾಖ್, 370 ಮತ್ತು ಈಗ ಸಿಎಬಿಯ ವಿಷಯವಾಗಿರಲಿ, ಅವರು ಅದೇ ರೀತಿ ಮಾಡಿದರು. ಅವರು ಜನರ, ಮತದಾರರ ಮನಸ್ಸಿನಲ್ಲಿ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ. ಜೆಡಿಯು ಅವರು ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆಂದು ತೋರಿಸಿಕೊಳ್ಳುತ್ತದೆ. ಆದರೆ ಸಮಯ ಬಂದಾಗ ಅವರು ಪಾರ್ಲಿಮೆಂಟ್‌ನಿಂದ ಹೊರಗುಳಿಯುತ್ತಾರೆ ಅಥವಾ ಅವರನ್ನೇ ಬೆಂಬಲಿಸುತ್ತಾರೆ ”ಎಂದು ಎ ಎನ್ ಸಿನ್ಹಾ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಸ್ಟಡೀಸ್‌ನ ರಾಜಕೀಯ ವಿಶ್ಲೇಷಕ ಡಿ ಎಂ ದಿವಾಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...