Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ - ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

ಪೌರತ್ವ ತಿದ್ದುಪಡಿ ಮಸೂದೆ: ಜೆಡಿಯುನಲ್ಲಿ ಭಿನ್ನಾಭಿಪ್ರಾಯ – ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ವಿರೋಧ

- Advertisement -
- Advertisement -

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುತ್ತಿರುವ ಬಗ್ಗೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಸೋಮವಾರ ನಿರಾಶೆ ವ್ಯಕ್ತಪಡಿಸಿದ ನಂತರ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಕೆ ವರ್ಮಾ ಅವರು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಷಯದ ಕುರಿತು ಮರು ಆಲೋಚಿಸುವಂತೆ ಮನವಿ ಮಾಡಿದ್ದಾರೆ.

“ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವುದರ ಕುರಿತು ಮರುಪರಿಶೀಲಿಸುವಂತೆ ನಾನು ನಿತೀಶ್ ಕುಮಾರ್ ಅವರನ್ನು ಕೋರುತ್ತೇನೆ. ಈ ಮಸೂದೆ ಅಸಂವಿಧಾನಿಕವಾಗಿದ್ದು, ತಾರತಮ್ಯದಿಂದ ಕೂಡಿದೆ ಮತ್ತು ಜೆಡಿಯುನ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ದೇಶದ ಏಕತೆ ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದೆ. ಗಾಂಧೀಜಿಯವರು ಇದನ್ನು ಬಲವಾಗಿ ನಿರಾಕರಿಸುತ್ತಿದ್ದರು ”ಎಂದು ವರ್ಮಾ ಟ್ವೀಟ್ ಮಾಡಿದ್ದಾರೆ.

ಜೆಡಿಯು ಲೋಕಸಭೆಯಲ್ಲಿ 16 ಸಂಸದರು ಮತ್ತು ರಾಜ್ಯಸಭೆಯಲ್ಲಿ 6 ಸಂಸದರನ್ನು ಹೊಂದಿದೆ.

ಇವರಿಬ್ಬರು ಸಹ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕುರಿತು ಬಹಿರಂಗ ವಿರೋಧ ವ್ಯಕ್ತಪಡಿಸಿರುವುದು ಪಕ್ಷವನ್ನು ಮುಜುಗರಕ್ಕೀಡುಮಾಡಿದೆ. ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಜಾತ್ಯತೀತತೆ ಮತ್ತು ಗಾಂಧಿವಾದಿ ಆದರ್ಶಗಳ ಹೆಸರಿನಲ್ಲಿ ಪ್ರತಿಜ್ಞೆ ತೆಗೆದುಕೊಂಡು ಈ ಅಸಂಗತವಾದ ಮಸೂದೆಯನ್ನು ಬೆಂಬಲಿಸುವುದು ದುರದೃಷ್ಟಕರ ಎಂದು ಪ್ರಶಾಂತ್‌ ಕಿಶೋರ್‌ ಅಸಮಾಧಾನ ವ್ಯಕ್ತಪಡಿಸಿದ್ದರು.

“ಜೆಡಿಯು ಸಿಎಬಿಯನ್ನು ಬೆಂಬಲಿಸುತ್ತಿರುವುದನ್ನು ನೋಡಿ ನಿರಾಶೆಗೊಂಡೆ. ಅದು ಧರ್ಮದ ಆಧಾರದ ಮೇಲೆ ಪೌರತ್ವದ ಹಕ್ಕನ್ನು ತಾರತಮ್ಯಗೊಳಿಸುತ್ತದೆ. ಮೊದಲ ಪುಟದಲ್ಲಿ ಮೂರು ಬಾರಿ ಜಾತ್ಯತೀತ ಪದವನ್ನು ಹೊಂದಿರುವ ಪಕ್ಷದ ಸಂವಿಧಾನ ಮತ್ತು ಗಾಂಧಿವಾದಿ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ನಾಯಕತ್ವವನ್ನು ಹೊಂದಿರುವವರಿಗೆ ಇದು ಹೊಂದಿಕೆಯಾಗುವುದಿಲ್ಲ ” ರಾಜಕೀಯ ವಿಶ್ಲೇಷಕ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ 15 ರಾಜ್ಯಗಳಿಗೂ ಹೆಚ್ಚು ಮತ್ತು ಶೇ.55% ಜನರು ವಾಸಿಸುವ ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ. ಅವುಗಳಲ್ಲಿ ಎಷ್ಟು ಜನರೊಡೆನೆ ಎನ್‌ಆರ್‌ಸಿ ಜಾರಿಗೊಳಿಸುವ ಕುರಿತಾಗಿ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

“ಅವರು ತಮ್ಮ ಹಾದಿಯನ್ನು ಒಮ್ಮೆ ಅಲ್ಲ ಮೂರು ಬಾರಿ ಬದಲಾಯಿಸಿದ್ದಾರೆ. ಟ್ರಿಪಲ್ ತಲಾಖ್, 370 ಮತ್ತು ಈಗ ಸಿಎಬಿಯ ವಿಷಯವಾಗಿರಲಿ, ಅವರು ಅದೇ ರೀತಿ ಮಾಡಿದರು. ಅವರು ಜನರ, ಮತದಾರರ ಮನಸ್ಸಿನಲ್ಲಿ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ. ಜೆಡಿಯು ಅವರು ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆಂದು ತೋರಿಸಿಕೊಳ್ಳುತ್ತದೆ. ಆದರೆ ಸಮಯ ಬಂದಾಗ ಅವರು ಪಾರ್ಲಿಮೆಂಟ್‌ನಿಂದ ಹೊರಗುಳಿಯುತ್ತಾರೆ ಅಥವಾ ಅವರನ್ನೇ ಬೆಂಬಲಿಸುತ್ತಾರೆ ”ಎಂದು ಎ ಎನ್ ಸಿನ್ಹಾ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಸ್ಟಡೀಸ್‌ನ ರಾಜಕೀಯ ವಿಶ್ಲೇಷಕ ಡಿ ಎಂ ದಿವಾಕರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...