Homeಮುಖಪುಟಪೌರತ್ವ ತಿದ್ದುಪಡಿ ಮಸೂದೆ ಮಂಡನೆ: ಭಾರೀ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆ ಮಂಡನೆ: ಭಾರೀ ಪ್ರತಿಭಟನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಪೌರತ್ವ ತಿದ್ದುಪಡಿ ಮಸೂದೆಯನ್ನು (2019) ಲೋಕಸಭೆಯಲ್ಲಿ ಮಂಡಿಸಿದರು.

ಮಸೂದೆ ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಕೆಳಮನೆಯಲ್ಲಿ ಚರ್ಚಿಸಬಾರದು ಎಂದು ಪ್ರತಿಪಕ್ಷಗಳು ಆರೋಪಿಸಿದರೆ, ಅಮಿತ್ ಶಾ ಅವರು ಉದ್ದೇಶಿತ ಶಾಸನವು ಮುಸ್ಲಿಮರ ವಿರುದ್ಧವಲ್ಲ ಎಂದು ಸಮರ್ಥಿಸಿಕೊಂಡರು. ಬಹಳ ಚರ್ಚೆಯ ನಂತರ, ’293’ ಮತಗಳು ಚರ್ಚೆಯ ಪರ ಬಿದ್ದಿದ್ದರಿಂದ  ಚರ್ಚೆಗೆ ಮಸೂದೆಯನ್ನು ಪರಿಚಯಿಸಲು ಸದನ ನಿರ್ಧರಿಸಿತು.

ಪ್ರಸ್ತಾವಿತ ಶಾಸನದ ಪ್ರಕಾರ, 2014 ರ ಡಿಸೆಂಬರ್ 31 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದಿರುವ ಮತ್ತು ಧಾರ್ಮಿಕ ಕಿರುಕುಳವನ್ನು ಎದುರಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರನ್ನು ಅಕ್ರಮ ವಲಸಿಗರೆಂದು ಪರಿಗಣಿಸಲಾಗುವುದಿಲ್ಲ. ಅವರಿಗೆ ಭಾರತೀಯ ಪೌರತ್ವ ನೀಡಲಾಗುವುದು.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳು, ಸಿಖ್ಖರು, ಬೌದ್ಧರು, ಕ್ರಿಶ್ಚಿಯನ್ನರು, ಪಾರ್ಸಿಗಳು ಮತ್ತು ಜೈನರ ವಿರುದ್ಧ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಈ ಮಸೂದೆಯು ಈ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ. ಅಲ್ಲದೆ, ಈ ಮಸೂದೆ ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬ ಆರೋಪ ತಪ್ಪಾಗಿದೆ ಎಂದು ಗೃಹ ಮಂತ್ರಿ ಅಮಿತ್‌ ಶಾ ತಿಳಿಸಿದ್ದಾರೆ.

ಈ ಮೂರು (ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ) ರಾಷ್ಟ್ರಗಳ ಯಾವುದೇ ಮುಸ್ಲಿಮರು ನಮ್ಮ ಕಾನೂನಿನ ಪ್ರಕಾರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದರೆ, ನಾವು ಅದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ಕಿರುಕುಳ ಎದುರಿಸದ ವ್ಯಕ್ತಿಯು ಈ ತಿದ್ದುಪಡಿಯ ಪ್ರಯೋಜನವನ್ನು ಪಡೆಯಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಸೂದೆಯ ವಿರುದ್ಧ ಕಳೆದ ಹಲವು ದಿನಗಳಿಂದ ಅಸ್ಸಾಂ, ಮಣಿಪುರ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೂಡ ಹಲವೆಡೆ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿವೆ.

ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ, ಸಿಪಿಐ, ಸಿಪಿಐ(ಎಂ), ಆಮ್‌ ಆದ್ಮಿ ಪಕ್ಷ, ಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಿವೆ. ಬೀದಿಯಲ್ಲಿ ನೂರಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...