Homeರಾಜಕೀಯಗುಜರಾತ್‌‌‌‌ನ ಎರಡು ಜಿಲ್ಲೆಗಳಲ್ಲಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವ; ಬಂಗಾಳದಲ್ಲಿ ಸಿಎಎ ಜಾರಿಗೆ ಒತ್ತಡ!

ಗುಜರಾತ್‌‌‌‌ನ ಎರಡು ಜಿಲ್ಲೆಗಳಲ್ಲಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವ; ಬಂಗಾಳದಲ್ಲಿ ಸಿಎಎ ಜಾರಿಗೆ ಒತ್ತಡ!

- Advertisement -
- Advertisement -

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ 1955 ರ ಪೌರತ್ವ ಕಾಯ್ದೆಯಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ನೀಡುವಂತೆ ಗುಜರಾತ್‌ನ ಮೆಹ್ಸಾನಾ ಮತ್ತು ಆನಂದ್ ಜಿಲ್ಲಾಧಿಕಾರಿಗಳಿಗೆ ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಸೂಚನೆ ಹೊರಡಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಬಂಗಾಳದ ಮತುವಾ ಸಮುದಾಯದ ಸದಸ್ಯರು ತಮಗೆ ಕೂಡಾ ಇದೇ ರೀತಿಯ ಪ್ರಯೋಜನವನ್ನು ಒದಗಿಸದಿದ್ದರೆ “ಬಿಜೆಪಿಯನ್ನು ನಂಬುವುದನ್ನು ನಿಲ್ಲಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳದ ಮತುವಾ ಸಮುದಾಯವು ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019(ಸಿಎಎ) ಅಡಿಯಲ್ಲಿ ತಮಗೆ ಪೌರತ್ವ ನೀಡುವ ಭರವಸೆಯನ್ನು ಉಳಿಸಿಕೊಳ್ಳಲು ವಿಫಲವಾದ ಬಿಜೆಪಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೌರತ್ವದ ಬೇಡಿಕೆಯನ್ನು ಈಡೇರಿಸದಿದ್ದರೆ ಬೀದಿಗಿಳಿಯುವುದಾಗಿ ಸಮುದಾಯದ ಮುಖಂಡರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮಗೂ ಶೀಘ್ರದಲ್ಲೇ ಪೌರತ್ವವನ್ನು ನೀಡಲಾಗುವುದು ಎಂದು ನಾವು ಭಾವಿಸುತ್ತೇವೆ, ಆದರೆ ಅದು ಸಂಭವಿಸದಿದ್ದರೆ, ಮತುವಾಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಾರೆ” ಎಂದು ಅಖಿಲ ಭಾರತ ಮತುವಾ ಮಹಾಸಂಘದ ಹಿರಿಯ ಮುಖಂಡ ಮುಕುತ್ ಮೋನಿ ಅಧಿಕಾರಿ ಹೇಳಿದರು.

ಇದನ್ನೂ ಓದಿ: ಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ರಾಜ್ಯದ ಪರಿಶಿಷ್ಟ ಜಾತಿಯ ಜನಸಂಖ್ಯೆಯ ಹೆಚ್ಚಿನ ಭಾಗವನ್ನು ಹೊಂದಿರುವ ಮತುವಾ ಸಮುದಾಯವು, 1950 ರ ದಶಕದಿಂದ ಧಾರ್ಮಿಕ ಕಿರುಕುಳ ಎಂದು ಆರೋಪಿಸಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಬಂದಿದ್ದರು. ಮಾರ್ಚ್ 1971 ರವರೆಗೆ ವಲಸೆ ಬಂದವರೆಲ್ಲರೂ 1955 ರ ಪೌರತ್ವ ಕಾಯ್ದೆಯ ಪ್ರಕಾರ ಭಾರತದ ಕಾನೂನುಬದ್ಧ ನಾಗರಿಕರಾಗುತ್ತಾರೆ. ಈ ಕಾಯಿದೆಯ ನಿಬಂಧನೆಗಳ ಪ್ರಕಾರ, 1971 ರ ನಂತರ ಬಂದವರು ಏಳು ವರ್ಷಗಳ ನಂತರ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬೇಕು.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ತೊರೆದು ಗುಜರಾತ್‌ನ ಎರಡು ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂ, ಸಿಖ್ಖ್‌, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕಾಯ್ದೆ-1955 ರ ಅಡಿಯಲ್ಲಿ ಭಾರತೀಯ ಪೌರತ್ವ ನೀಡಲು ಒಕ್ಕೂಟ ಸರ್ಕಾರ ಇತ್ತೀಚೆಗೆ ನಿರ್ಧರಿಸಿದೆ.

ಆದರೆ ಬಿಜೆಪಿ 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಡಿಯಲ್ಲಿ ಮತುವಾಗಳಿಗೆ ಪೌರತ್ವದ ಭರವಸೆ ನೀಡಿತ್ತು. “1955 ರ ಕಾಯಿದೆಯಡಿಯಲ್ಲಿ ಗುಜರಾತ್‌ನಲ್ಲಿ ಪೌರತ್ವವನ್ನು ನೀಡಲಾಗುತ್ತಿದೆ ಎಂದು ನಮಗೆ ತಿಳಿದಿದೆ. CAA-2019 ಅನ್ನು ಸಾಧ್ಯವಾದಷ್ಟು ಬೇಗ ಜಾರಿಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಸಮುದಾಯದ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ನೆರೆಯ ಸಾರ್ಕ್ ದೇಶಗಳಿಂದ ಧಾರ್ಮಿಕ ಕಿರುಕುಳದಿಂದ ಓಡಿಹೋದ ಎಲ್ಲಾ ಹಿಂದೂ, ಜೈನ, ಸಿಖ್ಖ್‌ ಮತ್ತು ಕ್ರಿಶ್ಚಿಯನ್ನರಿಗೆ ವಿವಾದಾತ್ಮಕ ಸಿಎಎ-2019 ಪೌರತ್ವವನ್ನು ನೀಡುತ್ತದೆ. ಆದರೆ ಅದರ ವಿರುದ್ಧ ನಡೆದ ವ್ಯಾಪಕವಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ವಿಶೇಷವಾಗಿ ಈಶಾನ್ಯದಲ್ಲಿ ಈ ಕಾನೂನು ಇನ್ನೂ ಜಾರಿಗೆ ಬಂದಿಲ್ಲ.

ಸುಮಾರು ಮೂರು ವರ್ಷಗಳಿಂದ ಜಾರಿಯಾಗಬೇಕಿದ್ದ ಸಿಎಎ ಕಾನೂನಿನ ಭವಿಷ್ಯದ ಬಗ್ಗೆ ಸಮುದಾಯದ ಸದಸ್ಯರು ಆತಂಕಗೊಂಡಿದ್ದಾರೆ ಎಂದು ಮತುವಾ ಮುಖಂಡರು ಆತಂಕಗೊಂಡಿದ್ದಾರೆ. ಮತುವಾ ಸಮುದಾಯಗಳು ಪ್ರಾಬಲ್ಯವಿರುವ ರಾಣಾಘಾಟ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಮುಕುಟ್‌ಮಣಿ ಅಧಿಕಾರಿ, ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಭರವಸೆಯನ್ನು ಉಳಿಸಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

“CAA 2019 ರ ಅಡಿಯಲ್ಲಿ ಪೌರತ್ವವನ್ನು ನೀಡಬೇಕೆಂದು ಮತುವಾಗಳು ಬಯಸುತ್ತಾರೆ. CAA 2019, ಒಮ್ಮೆ ಜಾರಿಗೆ ಬಂದರೆ ಮತುವಾ ಸಮುದಾಯಕ್ಕೆ ಸರಿಯಾದ ಮನ್ನಣೆಯನ್ನು ನೀಡುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

“2019 ರ ಲೋಕಸಭಾ ಚುನಾವಣೆಯಲ್ಲಿ ನೀಡಲಾಗಿರುವ ಭರವಸೆಯಂತೆ, 2024 ರ ಮೊದಲು CAA ಅನ್ನು ಜಾರಿಗೊಳಿಸದಿದ್ದರೆ ಸಮುದಾಯದ ಸದಸ್ಯರು ಇನ್ನು ಮುಂದೆ ಬಿಜೆಪಿಯ ಮೇಲೆ ನಂಬಿಕೆ ಇಡುವುದಿಲ್ಲ. ಬಿಜೆಪಿ ನಾಯಕತ್ವವು ಅದನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮತುವಾ ಮಹಾಸಂಘದ ಮತ್ತೊಬ್ಬ ಹಿರಿಯ ನಾಯಕ ಅಸೀಮ್ ಸರ್ಕಾರ್‌ ಹೇಳಿದ್ದಾರೆ.

“2024 ರ ಲೋಕಸಭಾ ಚುನಾವಣೆಯ ಮೊದಲು ಇದನ್ನು ಜಾರಿಗೆ ತರದಿದ್ದರೆ, ಮತುವಾಗಳು ಬಿಜೆಪಿಯನ್ನು ನಂಬುವುದನ್ನು ನಿಲ್ಲಿಸುತ್ತಾರೆ. ನೀವು 1955 ರ ಕಾಯಿದೆಯ ಅಡಿಯಲ್ಲಿ ಪೌರತ್ವವನ್ನು ನೀಡುತ್ತಿದ್ದರೆ 2019 ರಲ್ಲಿ ಹೊಸ ಕಾನೂನನ್ನು ಅಂಗೀಕರಿಸುವ ಅಗತ್ಯವೇನು? ಇದಕ್ಕೆ ಸ್ಪಷ್ಟೀಕರಣ ಇರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಹರಿಂಗಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಆಸೀಮ್ ಸರ್ಕಾರ್ ಪಿಟಿಐಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸುಮಾರು 30 ಲಕ್ಷ ಮತುವಾಗಳು ವಾಸಿಸುತ್ತಿದ್ದು, ಸಮುದಾಯವು ಕನಿಷ್ಠ ಐದು ಲೋಕಸಭಾ ಸ್ಥಾನಗಳಲ್ಲಿ ಮತ್ತು ನಾಡಿಯಾ, ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳ ಸುಮಾರು 40 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದೆ ಎಂದು ಸರ್ಕಾರ ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸಿಎಎ ಜಾರಿಯಾಗುವುದಿಲ್ಲ: ಸಿಎಂ ಪಿಣರಾಯಿ ವಿಜಯನ್ ಪುನರುಚ್ಚಾರ

ಕಳೆದ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯಲ್ಲಿ ಸಿಎಎ ಜಾರಿಗೊಳಿಸುವ ಭರವಸೆಯು ಬಿಜೆಪಿಗೆ ಪ್ರಮುಖ ಚುನಾವಣಾ ವಿಚಾರವಾಗಿತ್ತು. ಬಿಜೆಪಿಯ ಈ ಘೋಷಣೆಯಿಂದಾಗಿ 2019 ರಲ್ಲಿ ಎಲ್ಲಾ ಐದು ಮತುವಾ ಪ್ರಾಬಲ್ಯವಿರುವ ಲೋಕಸಭಾ ಸ್ಥಾನಗಳು ಮತ್ತು 2021 ರಲ್ಲಿ ಕನಿಷ್ಠ 29 ವಿಧಾನಸಭಾ ಸ್ಥಾನಗಳನ್ನು ಗಳಿಸಲು ಪಕ್ಷಕ್ಕೆ ಸಹಾಯ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...