Homeರಾಜಕೀಯಗುಜರಾತ್‌‌‌‌ನ ಎರಡು ಜಿಲ್ಲೆಗಳಲ್ಲಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವ; ಬಂಗಾಳದಲ್ಲಿ ಸಿಎಎ ಜಾರಿಗೆ ಒತ್ತಡ!

ಗುಜರಾತ್‌‌‌‌ನ ಎರಡು ಜಿಲ್ಲೆಗಳಲ್ಲಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವ; ಬಂಗಾಳದಲ್ಲಿ ಸಿಎಎ ಜಾರಿಗೆ ಒತ್ತಡ!

- Advertisement -
- Advertisement -

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ 1955 ರ ಪೌರತ್ವ ಕಾಯ್ದೆಯಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ನೀಡುವಂತೆ ಗುಜರಾತ್‌ನ ಮೆಹ್ಸಾನಾ ಮತ್ತು ಆನಂದ್ ಜಿಲ್ಲಾಧಿಕಾರಿಗಳಿಗೆ ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಧಿಸೂಚನೆ ಹೊರಡಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಬಂಗಾಳದ ಮತುವಾ ಸಮುದಾಯದ ಸದಸ್ಯರು ತಮಗೆ ಕೂಡಾ ಇದೇ ರೀತಿಯ ಪ್ರಯೋಜನವನ್ನು ಒದಗಿಸದಿದ್ದರೆ “ಬಿಜೆಪಿಯನ್ನು ನಂಬುವುದನ್ನು ನಿಲ್ಲಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳದ ಮತುವಾ ಸಮುದಾಯವು ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019(ಸಿಎಎ) ಅಡಿಯಲ್ಲಿ ತಮಗೆ ಪೌರತ್ವ ನೀಡುವ ಭರವಸೆಯನ್ನು ಉಳಿಸಿಕೊಳ್ಳಲು ವಿಫಲವಾದ ಬಿಜೆಪಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೌರತ್ವದ ಬೇಡಿಕೆಯನ್ನು ಈಡೇರಿಸದಿದ್ದರೆ ಬೀದಿಗಿಳಿಯುವುದಾಗಿ ಸಮುದಾಯದ ಮುಖಂಡರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮಗೂ ಶೀಘ್ರದಲ್ಲೇ ಪೌರತ್ವವನ್ನು ನೀಡಲಾಗುವುದು ಎಂದು ನಾವು ಭಾವಿಸುತ್ತೇವೆ, ಆದರೆ ಅದು ಸಂಭವಿಸದಿದ್ದರೆ, ಮತುವಾಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಾರೆ” ಎಂದು ಅಖಿಲ ಭಾರತ ಮತುವಾ ಮಹಾಸಂಘದ ಹಿರಿಯ ಮುಖಂಡ ಮುಕುತ್ ಮೋನಿ ಅಧಿಕಾರಿ ಹೇಳಿದರು.

ಇದನ್ನೂ ಓದಿ: ಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ರಾಜ್ಯದ ಪರಿಶಿಷ್ಟ ಜಾತಿಯ ಜನಸಂಖ್ಯೆಯ ಹೆಚ್ಚಿನ ಭಾಗವನ್ನು ಹೊಂದಿರುವ ಮತುವಾ ಸಮುದಾಯವು, 1950 ರ ದಶಕದಿಂದ ಧಾರ್ಮಿಕ ಕಿರುಕುಳ ಎಂದು ಆರೋಪಿಸಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಬಂದಿದ್ದರು. ಮಾರ್ಚ್ 1971 ರವರೆಗೆ ವಲಸೆ ಬಂದವರೆಲ್ಲರೂ 1955 ರ ಪೌರತ್ವ ಕಾಯ್ದೆಯ ಪ್ರಕಾರ ಭಾರತದ ಕಾನೂನುಬದ್ಧ ನಾಗರಿಕರಾಗುತ್ತಾರೆ. ಈ ಕಾಯಿದೆಯ ನಿಬಂಧನೆಗಳ ಪ್ರಕಾರ, 1971 ರ ನಂತರ ಬಂದವರು ಏಳು ವರ್ಷಗಳ ನಂತರ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಬೇಕು.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ತೊರೆದು ಗುಜರಾತ್‌ನ ಎರಡು ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂ, ಸಿಖ್ಖ್‌, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಕಾಯ್ದೆ-1955 ರ ಅಡಿಯಲ್ಲಿ ಭಾರತೀಯ ಪೌರತ್ವ ನೀಡಲು ಒಕ್ಕೂಟ ಸರ್ಕಾರ ಇತ್ತೀಚೆಗೆ ನಿರ್ಧರಿಸಿದೆ.

ಆದರೆ ಬಿಜೆಪಿ 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಡಿಯಲ್ಲಿ ಮತುವಾಗಳಿಗೆ ಪೌರತ್ವದ ಭರವಸೆ ನೀಡಿತ್ತು. “1955 ರ ಕಾಯಿದೆಯಡಿಯಲ್ಲಿ ಗುಜರಾತ್‌ನಲ್ಲಿ ಪೌರತ್ವವನ್ನು ನೀಡಲಾಗುತ್ತಿದೆ ಎಂದು ನಮಗೆ ತಿಳಿದಿದೆ. CAA-2019 ಅನ್ನು ಸಾಧ್ಯವಾದಷ್ಟು ಬೇಗ ಜಾರಿಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಸಮುದಾಯದ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ನೆರೆಯ ಸಾರ್ಕ್ ದೇಶಗಳಿಂದ ಧಾರ್ಮಿಕ ಕಿರುಕುಳದಿಂದ ಓಡಿಹೋದ ಎಲ್ಲಾ ಹಿಂದೂ, ಜೈನ, ಸಿಖ್ಖ್‌ ಮತ್ತು ಕ್ರಿಶ್ಚಿಯನ್ನರಿಗೆ ವಿವಾದಾತ್ಮಕ ಸಿಎಎ-2019 ಪೌರತ್ವವನ್ನು ನೀಡುತ್ತದೆ. ಆದರೆ ಅದರ ವಿರುದ್ಧ ನಡೆದ ವ್ಯಾಪಕವಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ವಿಶೇಷವಾಗಿ ಈಶಾನ್ಯದಲ್ಲಿ ಈ ಕಾನೂನು ಇನ್ನೂ ಜಾರಿಗೆ ಬಂದಿಲ್ಲ.

ಸುಮಾರು ಮೂರು ವರ್ಷಗಳಿಂದ ಜಾರಿಯಾಗಬೇಕಿದ್ದ ಸಿಎಎ ಕಾನೂನಿನ ಭವಿಷ್ಯದ ಬಗ್ಗೆ ಸಮುದಾಯದ ಸದಸ್ಯರು ಆತಂಕಗೊಂಡಿದ್ದಾರೆ ಎಂದು ಮತುವಾ ಮುಖಂಡರು ಆತಂಕಗೊಂಡಿದ್ದಾರೆ. ಮತುವಾ ಸಮುದಾಯಗಳು ಪ್ರಾಬಲ್ಯವಿರುವ ರಾಣಾಘಾಟ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಮುಕುಟ್‌ಮಣಿ ಅಧಿಕಾರಿ, ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಭರವಸೆಯನ್ನು ಉಳಿಸಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

“CAA 2019 ರ ಅಡಿಯಲ್ಲಿ ಪೌರತ್ವವನ್ನು ನೀಡಬೇಕೆಂದು ಮತುವಾಗಳು ಬಯಸುತ್ತಾರೆ. CAA 2019, ಒಮ್ಮೆ ಜಾರಿಗೆ ಬಂದರೆ ಮತುವಾ ಸಮುದಾಯಕ್ಕೆ ಸರಿಯಾದ ಮನ್ನಣೆಯನ್ನು ನೀಡುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

“2019 ರ ಲೋಕಸಭಾ ಚುನಾವಣೆಯಲ್ಲಿ ನೀಡಲಾಗಿರುವ ಭರವಸೆಯಂತೆ, 2024 ರ ಮೊದಲು CAA ಅನ್ನು ಜಾರಿಗೊಳಿಸದಿದ್ದರೆ ಸಮುದಾಯದ ಸದಸ್ಯರು ಇನ್ನು ಮುಂದೆ ಬಿಜೆಪಿಯ ಮೇಲೆ ನಂಬಿಕೆ ಇಡುವುದಿಲ್ಲ. ಬಿಜೆಪಿ ನಾಯಕತ್ವವು ಅದನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮತುವಾ ಮಹಾಸಂಘದ ಮತ್ತೊಬ್ಬ ಹಿರಿಯ ನಾಯಕ ಅಸೀಮ್ ಸರ್ಕಾರ್‌ ಹೇಳಿದ್ದಾರೆ.

“2024 ರ ಲೋಕಸಭಾ ಚುನಾವಣೆಯ ಮೊದಲು ಇದನ್ನು ಜಾರಿಗೆ ತರದಿದ್ದರೆ, ಮತುವಾಗಳು ಬಿಜೆಪಿಯನ್ನು ನಂಬುವುದನ್ನು ನಿಲ್ಲಿಸುತ್ತಾರೆ. ನೀವು 1955 ರ ಕಾಯಿದೆಯ ಅಡಿಯಲ್ಲಿ ಪೌರತ್ವವನ್ನು ನೀಡುತ್ತಿದ್ದರೆ 2019 ರಲ್ಲಿ ಹೊಸ ಕಾನೂನನ್ನು ಅಂಗೀಕರಿಸುವ ಅಗತ್ಯವೇನು? ಇದಕ್ಕೆ ಸ್ಪಷ್ಟೀಕರಣ ಇರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಹರಿಂಗಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಆಸೀಮ್ ಸರ್ಕಾರ್ ಪಿಟಿಐಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸುಮಾರು 30 ಲಕ್ಷ ಮತುವಾಗಳು ವಾಸಿಸುತ್ತಿದ್ದು, ಸಮುದಾಯವು ಕನಿಷ್ಠ ಐದು ಲೋಕಸಭಾ ಸ್ಥಾನಗಳಲ್ಲಿ ಮತ್ತು ನಾಡಿಯಾ, ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳ ಸುಮಾರು 40 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದೆ ಎಂದು ಸರ್ಕಾರ ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸಿಎಎ ಜಾರಿಯಾಗುವುದಿಲ್ಲ: ಸಿಎಂ ಪಿಣರಾಯಿ ವಿಜಯನ್ ಪುನರುಚ್ಚಾರ

ಕಳೆದ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯಲ್ಲಿ ಸಿಎಎ ಜಾರಿಗೊಳಿಸುವ ಭರವಸೆಯು ಬಿಜೆಪಿಗೆ ಪ್ರಮುಖ ಚುನಾವಣಾ ವಿಚಾರವಾಗಿತ್ತು. ಬಿಜೆಪಿಯ ಈ ಘೋಷಣೆಯಿಂದಾಗಿ 2019 ರಲ್ಲಿ ಎಲ್ಲಾ ಐದು ಮತುವಾ ಪ್ರಾಬಲ್ಯವಿರುವ ಲೋಕಸಭಾ ಸ್ಥಾನಗಳು ಮತ್ತು 2021 ರಲ್ಲಿ ಕನಿಷ್ಠ 29 ವಿಧಾನಸಭಾ ಸ್ಥಾನಗಳನ್ನು ಗಳಿಸಲು ಪಕ್ಷಕ್ಕೆ ಸಹಾಯ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...