Homeಅಂತರಾಷ್ಟ್ರೀಯಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯ: ಅಮೆರಿಕ ಚುನಾವಣಾ ನೀತಿಗೆ ಬದಲಾವಣೆ ತರುವ ಆದೇಶಕ್ಕೆ ಟ್ರಂಪ್...

ಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯ: ಅಮೆರಿಕ ಚುನಾವಣಾ ನೀತಿಗೆ ಬದಲಾವಣೆ ತರುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಮತದಾರರ ನೋಂದಣಿಗೆ ಪೌರತ್ವ ದಾಖಲೆ ಕಡ್ಡಾಯಗೊಳಿಸುವುದು ಮತ್ತು ಚುನಾವಣೆಯ ದಿನಾಂತ್ಯದೊಳಗೆ ಎಲ್ಲಾ ಮತಪತ್ರಗಳನ್ನು ಸ್ವೀಕರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಅಮೆರಿಕದ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ತರಲಿರುವ ಕಾರ್ಯಕಾರಿ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಮಾ.25) ಸಹಿ ಹಾಕಿದ್ದಾರೆ. ಹೊಸ ಬದಲಾವಣೆಗಳು ಕಾನೂನು ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ.

ಮೂಲಭೂತ ಮತ್ತು ಅಗತ್ಯ ಚುನಾವಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಮೆರಿಕ ವಿಫಲವಾಗಿದೆ ಎಂದು ಟ್ರಂಪ್ ಆದೇಶವು ಪ್ರತಿಪಾದಿಸಿದೆ. ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲು ಮತ್ತು ಚುನಾವಣೆಗೆ ಸಂಬಂಧಿಸಿದ ಅಪರಾಧಗಳನ್ನು ವಿಚಾರಣೆಗೆ ಒಳಪಡಿಸಲು ಫೆಡರಲ್ ಏಜೆನ್ಸಿಗಳೊಂದಿಗೆ ಸಹಕರಿಸುವಂತೆ ರಾಜ್ಯಗಳನ್ನು ಒತ್ತಾಯಿಸಿದೆ. ಚುನಾವಣಾ ನಿಯಮಗಳನ್ನು ಪಾಲಿಸಲು ವಿಫಲವಾದ ರಾಜ್ಯಗಳು ಫೆಡರಲ್ ನಿಧಿಯಲ್ಲಿ ಕಡಿತವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಭಾರತದ ಚುನಾವಣಾ ವ್ಯವಸ್ಥೆಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಟ್ರಂಪ್, “ಆಧುನಿಕ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಮತ್ತು ಇನ್ನೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಬಳಸುವ ಮೂಲಭೂತ ಮತ್ತು ಅಗತ್ಯ ಚುನಾವಣಾ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಮೆರಿಕ ವಿಫಲವಾಗಿದೆ. ಉದಾಹರಣೆಗೆ, ಭಾರತ ಮತ್ತು ಬ್ರೆಜಿಲ್ ಮತದಾರರ ಗುರುತನ್ನು ಬಯೋಮೆಟ್ರಿಕ್ ಡೇಟಾಬೇಸ್‌ಗೆ ಜೋಡಿಸುತ್ತಿವೆ. ಆದರೆ, ಅಮೆರಿಕ ಪೌರತ್ವಕ್ಕಾಗಿ ಸ್ವಯಂ-ದೃಢೀಕರಣವನ್ನು ಹೆಚ್ಚಾಗಿ ಅವಲಂಬಿಸಿದೆ” ಎಂದು ಹೇಳಿದ್ದಾರೆ.

ಟ್ರಂಪ್ ಆದೇಶವು, ಫೆಡರಲ್ ಚುನಾವಣೆಗಳಲ್ಲಿ ಮತ ಚಲಾಯಿಸುವ ಅರ್ಹತೆ ಪಡೆಯಲು ಪಾಸ್‌ಪೋರ್ಟ್‌ನಂತಹ ಪೌರತ್ವದ ದಾಖಲೆಯನ್ನು ಕಡ್ಡಾಯಗೊಳಿಸಲು ಫೆಡರಲ್ ಮತದಾರರ ನೋಂದಣಿ ನಮೂನೆಗೆ ತಿದ್ದುಪಡಿ ತರಲಿದೆ.

“ಎಲ್ಲಕ್ಕಿಂತ ಹೆಚ್ಚಾಗಿ, ಚುನಾವಣೆಗಳು ಪ್ರಾಮಾಣಿಕವಾಗಿರಬೇಕು ಮತ್ತು ಸಾರ್ವಜನಿಕರ ನಂಬಿಕೆಗೆ ಅರ್ಹವಾಗಿರಬೇಕು. ಅದಕ್ಕೆ ಮತದಾರರು ತಮ್ಮ ಮತಗಳನ್ನು ವಂಚನೆ ಅಥವಾ ತಪ್ಪಿನಿಂದ ರಕ್ಷಿಸಿಕೊಳ್ಳಲು ಪರಿಣಾಮಕಾರಿಯಾಗಿ ಪರಿಶೀಲಿಸಲು ಅನುವು ಮಾಡಿಕೊಡುವ ಮತದಾರರು ಪರಿಶೀಲಿಸಬಹುದಾದ ಕಾಗದದ ದಾಖಲೆಯನ್ನು ಉತ್ಪಾದಿಸುವ ಮತದಾನ ವಿಧಾನಗಳು ಬೇಕಾಗುತ್ತವೆ. ಚುನಾವಣಾ ಸಮಗ್ರತೆಯ ಮಾನದಂಡಗಳನ್ನು ಅದಕ್ಕೆ ಅನುಗುಣವಾಗಿ ಮಾರ್ಪಡಿಸಬೇಕು. ಫೆಡರಲ್ ಕಾನೂನನ್ನು ಜಾರಿಗೊಳಿಸುವುದು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ರಕ್ಷಿಸುವುದು ನನ್ನ ಆಡಳಿತದ ನೀತಿಯಾಗಿದೆ” ಎಂದು ಟ್ರಂಪ್ ಆದೇಶದಲ್ಲಿ ಹೇಳಲಾಗಿದೆ.

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...