Homeಮುಖಪುಟಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

- Advertisement -
- Advertisement -

‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಪುಸ್ತಕ ಬಿಡುಗಡೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿದ್ದ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ರಿಟ್ ಅರ್ಜಿ ಆಲಿಸಿದ ಕೋರ್ಟ್ ಪುಸ್ತಕ ಬಿಡುಗಡೆ, ಮಾರಾಟ ಮತ್ತು ಮಾಧ್ಯಮ ಪ್ರಸಾರಕ್ಕೆ ತಡೆ ನೀಡಿದೆ.

ಕಳೆದ ತಿಂಗಳು ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿತ್ತು.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ನಿನ್ನೆ ಟ್ವೀಟ್ ಮಾಡಿದ್ದರು.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಬೇಕಿತ್ತು.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿತ್ತು.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...