Homeಮುಖಪುಟಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ; ಬಿಜೆಪಿಗೆ ಮುಖಭಂಗ

- Advertisement -
- Advertisement -

‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಪುಸ್ತಕ ಬಿಡುಗಡೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ನಡೆಸಿರುವ ಪಿತೂರಿ ಎಂದು ಆರೋಪಿಸಿದ್ದ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ರಿಟ್ ಅರ್ಜಿ ಆಲಿಸಿದ ಕೋರ್ಟ್ ಪುಸ್ತಕ ಬಿಡುಗಡೆ, ಮಾರಾಟ ಮತ್ತು ಮಾಧ್ಯಮ ಪ್ರಸಾರಕ್ಕೆ ತಡೆ ನೀಡಿದೆ.

ಕಳೆದ ತಿಂಗಳು ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿತ್ತು.

“ಸಿದ್ದು ನಿಜಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಆಹ್ವಾನ ಪತ್ರಿಕೆಯನ್ನು ನಿನ್ನೆ ಟ್ವೀಟ್ ಮಾಡಿದ್ದರು.

ಆಹ್ವಾನ ಪತ್ರಿಕೆಯ ಪ್ರಕಾರ ಈ ಪುಸ್ತಕವನ್ನು ವಿಕೆಪಿ ಎಂಬ ಅನಾಮಧೇಯ ವ್ಯಕ್ತಿ ಬರೆದಿದ್ದಾರೆ. ಇದು ಮೊದಲ ಸಂಪುಟವಾಗಿದ್ದು, ಇನ್ನು ಹಲವು ಸಂಪುಟಗಳನ್ನು ರಚಿಸುವ ಉದ್ದೇಶ ಬಿಜೆಪಿಗಿದೆ ಎಂಬುದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಟೌನ್‌ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಅಶ್ವಥ್ ನಾರಾಯಣ್ ಪುಸ್ತಕ ಬಿಡುಗಡೆ ಮಾಡಿದರೆ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಬೇಕಿತ್ತು.

ಪಠ್ಯಪುಸ್ತಕ ತಿರುಚಿದ ಆರೋಪ ಹೊತ್ತಿರುವ ಬಲಪಂಥೀಯ ಬರಹಗಾರ-ಪತ್ರಕರ್ತರಾದ ರೋಹಿತ್ ಚಕ್ರತೀರ್ಥ, ವೃಶಾಂಕ್ ಭಟ್, ಸಂತೋಷ್ ತಮ್ಮಯ್ಯ  ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿತ್ತು.

ಈ ಪುಸ್ತಕವು ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರ ಮಾಡಲು ಮತ್ತು ಒಂದು ಸಮುದಾಯವನ್ನು ತುಚ್ಛೀಕರಣ ಮಾಡಲು ರಚಿಸಲಾಗಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

“ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ದುರುದ್ದೇಶದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.9ರಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಬರುವ ಪುರಭವನದಲ್ಲಿ ಈ ಕಾರ್ಯಕ್ರಮ ಇರುವ ಬಗ್ಗೆ ಆಹ್ವಾನ ಪತ್ರಿಕೆ ಹರಿದಾಡುತ್ತಿದೆ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪತ್ರಿಕೆಯಲ್ಲಿನ ಪುಸ್ತಕದ ಮುಖಪುಟ ವಿಪಕ್ಷ ನಾಯಕರ ಅವಹೇಳನಕಾರಿ, ಕಪೋಲಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಸ್ಪಷ್ಟವಾಗಿದೆ. ಇಂತಹ ದ್ವೇ‍ಷಪೂರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಪುಸ್ತಕ ಬಿಡುಗಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಸಿದ್ದರಾಮಯ್ಯ ಸರ್ಕಾರದ ಅಭಿವೃದ್ದಿ ಯೋಜನೆಗಳ ಸಾಲು ಸಾಲು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯನವರ ಕನಸು ಹಸಿವು ಮುಕ್ತ ಕರ್ನಾಟಕ: ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

ಬಡವರಿಗೆ ಉದ್ಯೋಗ: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು, ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಗುಡಿಸಲು ಮುಕ್ತ ಕರ್ನಾಟಕದ ಕನಸು: ಸಿದ್ದರಾಮಯ್ಯ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು. ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

ಶಿಕ್ಷಣ ಕ್ರಾಂತಿ -ಸಿದ್ದು ಕನಸು: ‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...