Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...