Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...