Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...