Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...