Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...