Homeಕರ್ನಾಟಕಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

- Advertisement -
ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸೇರಿ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಇದು ಸಮುದಾಯದ ನಡುವೆ ಕೊರೊನ ಹರಡುವ ಆತಂಕವನ್ನು ಹುಟ್ಟುಹಾಕಿದೆ. ಕೊರೊನ ವಿರುದ್ದ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರಿಯಾಗಿ ಸುರಕ್ಷಾ ಸಲಕರಣೆಗಳನ್ನು ನೀಡಿಲ್ಲ. ಹಾಗಾಗಿ ಸೋಂಕು ಹರಡಲು ಕಾರಣವಾಗಿದೆ. ದಲಿತರೇ ಹೆಚ್ಚಾಗಿರುವ ಪೌರಕಾರ್ಮಿಕರ ಬಗ್ಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ನಿರ್ಲಕ್ಷ್ಯ ವಹಿಸಿರುವುದು ಎದ್ದುಕಾಣುತ್ತದೆ ಎಂದು ದೂರಲಾಗಿದೆ.
ಪೌರಕಾರ್ಮಿಕರು ಅಪಾಯಕಾರಿ ಸನ್ನಿವೇಶದಲ್ಲಿ ಕೆಲಸ ಮಾಡಬೇಕಾಗಿ ಬಂದಿದೆ ಮತ್ತು ಅವರು ಕೊರೊನ ಸೋಂಕಿತರನ್ನು ಕ್ವಾರಂಟೈನ್ ಮತ್ತು ಸೀಲ್ ಡೌನ್ ಮಾಡಿರುವ ಪ್ರದೇಶಗಳಲ್ಲಿ ಯಾವುದೇ ಸುರಕ್ಷಾ ಸಲಕರಣೆಗಳಿಲ್ಲದೆ ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕ್ವಾರಂಟೈನ್ ನಲ್ಲಿರುವವರು ಎಸೆಯುವ ಕಸವನ್ನು ಮುಟ್ಟಿ ಎತ್ತಿ ಹಾಕಬೇಕು.  ಸ್ವಚ್ಚಗೊಳಿಸಬೇಕು. ಕಸದ ಆಟೋದವರು ಕೂಡ ಸೋಂಕು ಹರಡಿರುವವರು ನೀಡುವ ಕಸವನ್ನು ತೆಗೆದುಕೊಳ್ಳಬೇಕು. ಅದರಲ್ಲಿ ರೋಗಾಣುಗಳಿದ್ದು ಪೌರಕಾರ್ಮಿಕರಿಗೆ ಕೊರೊನ ಹರಡಲು ಕಾರಣವಾಗಿದೆ.
ಕೊರೊನಾ ವಾರಿಯರ್ ಗಳೆಂದು ಎನ್-95 ಮಾಸ್ಕ್, ವೈಯಕ್ತಿಕ ಸುರಕ್ಷ ಸಲಕರಣೆಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಆದರೆ ಇವು ಕೆಲವರಿಗೆ ಮಾತ್ರ ದೊರೆಯುತ್ತವೆಯೇ ಹೊರತು ಪೌರಕಾರ್ಮಿಕರಿಗೆ ಸಿಗುತ್ತಿಲ್ಲ.  ಕೊರೊನ ಸೋಂಕಿತರು ಹೆಚ್ಚಾಗಿರುವ ಅಪಾಯಕಾರಿ ಪ್ರದೇಶದಲ್ಲಿ ಸಾಮಾನ್ಯ ಮಾಸ್ಕ್ ಧರಿಸಿ ಪೌರ ಕಾರ್ಮಿಕರು ಕೆಲಸ ಮಾಡಿ ನೇರವಾಗಿಯೇ ಮನೆಗಳಿಗೆ ಮರಳುತ್ತಾರೆ. ಸೋಂಕು ಅಂಟಿಕೊಂಡಿದ್ದರೆ ಮನೆಯವರಿಗೂ ಅದು ಹರಡುತ್ತದೆ. ಹಾಗಾಗಿ ಕೆಲಸದ ಪ್ರದೇಶಗಳಲ್ಲೇ ಸ್ನಾನ ಮಾಡಿ, ಬಟ್ಟೆಗಳನ್ನು ಬದಲಿಸಲು ಸೌಕರ್ಯ ಕಲ್ಪಿಸಿದರೆ ಸೋಂಕು ಹರಡುವುದನ್ನು ತಡೆಯಬಹುದಾಗಿದೆ.
ಪೌರಕಾರ್ಮಿಕರ ಸುರಕ್ಷತೆ ಗಮನಹರಿಸಬೇಕು. ಕ್ವಾರಂಟೈನ್ ಮತ್ತು ಸೀಲ್ ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಗಳನ್ನು ಕೊಡಬೇಕು. ಕೆಲಸದ ಪ್ರದೇಶದಲ್ಲೇ ಸ್ನಾನಕ್ಕೆ ಸೌಕರ್ಯ ಮಾಡಿಕೊಡಬೇಕೆಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಆದರೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ಇದನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಪರಿಣಾಮ ಇಂದು 23ಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರು ಕೊರೊನ ಸೋಂಕಿನಿಂದ ನರಳಬೇಕಾಗಿ ಬಂದಿದೆ. ಇದರಿಂದ ಅವರ ಕುಟುಂಬಗಳು ಆತಂಕಕ್ಕೆ ಒಳಗಾಗಿವೆ.
ನಾನುಗೌರಿ.ಕಾಂ ಜೊತೆ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸೈಯದ್ ಮುಜೀಬ್ ದೂರವಾಣಿಯಲ್ಲಿ ಮಾತನಾಡಿದರು. “ಸಂಘದಿಂದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ನೀಡಿದ್ದೇವೆ. ಪೌರಕಾರ್ಮಿಕರಿಗೆ ಪಿಪಿಇ ಕಿಟ್ ಕೊಡಬೇಕು. ಎನ್-95 ಮಾಸ್ಕ್ ಕೊಡಬೇಕು. ರ್ಯಾಂಡಮ್ ಆಗಿ ಪರೀಕ್ಷೆ ನಡೆಸಬೇಕು. ಕನಿಷ್ಠ 2 ವಾರಕ್ಕೊಮ್ಮೆ ಎಲ್ಲಾ ಪೌರಕಾರ್ಮಿಕರಿಗೂ ಪರೀಕ್ಷೆ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದೆ. ಆದರೆ ಇದ್ಯಾವುದನ್ನು ಸರ್ಕಾರ ಪಾಲಿಸುತ್ತಿಲ್ಲ” ಎಂದು ದೂರಿದರು.
“ದಾನಿಗಳು ನೀಡಿದ ಸಾಮಾನ್ಯ ಮಾಸ್ಕ್ ಗಳನ್ನು ಪೌರಕಾರ್ಮಿಕರಿಗೆ ವಿತರಿಸಲಾಗಿದೆ. ಗ್ಲೌಸ್ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ. ಕ್ವಾರಂಟೈನ್ ಪ್ರದೇಶದಲ್ಲು ಪೌರಕಾರ್ಮಿಕರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಕೊರೊನ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ವಚ್ಛತಾ ಕಾರ್ಮಿಕರು ಮತ್ತು ಕಸ ಎತ್ತುವಳಿ ಮಾಡುವ ಕಾರ್ಮಿಕರು ಸ್ಥಳದಲ್ಲಿ ಸ್ನಾನ ಮಾಡದೆ ನೇರ ಮನೆಗೆ ತೆರಳುವುದರಿಂದ ಕುಟುಂಬದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಸಮುದಾಯದ ನಡುವೆಯೇ ಸೋಂಕು ಹರಡಲಿದೆ. ಬಡತನದಲ್ಲಿ ಜೀವನ ನಡೆಸುವ ಪೌರಕಾರ್ಮಿಕರು ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದು ಸರಿಯಲ್ಲ. ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.
ಹೆಸರು ಹೇಳಲು ಇಚ್ಚಿಸದ ಪೌರಕಾರ್ಮಿಕರು ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಂಡರು. “ನಾವು ಗುಣಮಟ್ಟದ ಮಾಸ್ಕ್ ಕೇಳಿದರೆ ಕೊಡುತ್ತಿಲ್ಲ. ಖರೀದಿ ಮಾಡಿದ್ದರೂ ಅವು ಪ್ರಬಲರಿಗೆ ಮಾತ್ರ ದೊರೆಯುತ್ತವೆ. ನಾವು ಸಾಮಾನ್ಯ ಮಾಸ್ಕ್ ಧರಿಸಿ ಗ್ಲೌಸ್ ಹಾಕಿಕೊಂಡು ಕ್ವಾರಂಟೈನ್ ಪ್ರದೇಶದಲ್ಲಿ ಕೆಲಸ ಮಾಡಬೇಕಾಗಿದೆ. ನಮಗೂ ಹೆಂಡತಿ, ಮಕ್ಕಳು, ಕುಟುಂಬ ಇದೆ. ನಮಗೆ ಸೋಂಕು ಹರಡಿದರೆ ಇಡೀ ಕುಟುಂಬಕ್ಕೆ ಹರಡುವ ಅಪಾಯವಿದೆ. ನಾವು ಆತಂಕದಲ್ಲೇ ಕೆಲಸ ಮಾಡುತ್ತೇವೆ. ನಮಗೆ ಯಾರೂ ನೆರವಿಗೆ ಬರುತ್ತಿಲ್ಲ” ಎಂದು ಹೇಳಿದರು.
ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆ ಎರಡರಲ್ಲೇ 23 ಮಂದಿ ಪೌರಕಾರ್ಮಿಕರಿಗೆ ಕೊರೊನ ಸೋಂಕು ಹರಡಿದ್ದರೆ ಇನ್ನು ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಇಬ್ಬರು ಮತ್ತು ಸಿರಾದಲ್ಲಿ ಇಬ್ಬರಿಗೆ ಕೊರೊನ ಸೋಂಕು ತಗುಲಿದೆ. ಕೊರೊನ ವಾರಿಯರ್ ಗಳಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ಇವರನ್ನು ಕೇವಲ ಸನ್ಮಾನಿಸುವುದರಿಂದ, ಪುಷ್ಪ ಹಾಕುವುದರಿಂದ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡುವುದರಿಂದ ಕೊರೊನ ಸಮುದಾಯದಲ್ಲಿ ಹರಡುವುದನ್ನು ನಿಲ್ಲಿಸಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...