Homeಕರ್ನಾಟಕತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ...

ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

- Advertisement -
- Advertisement -

ತಮ್ಮ ಮೇಲಿನ ಹಿಂಸಾಚಾರ, ಜಾತಿ ಹಾಗೂ ಲಿಂಗಾಧಾರಿತ ದೌರ್ಜನ್ಯ ಖಂಡಿಸಿ ಮಹಿಳಾ ಪೌರಕಾರ್ಮಿಕರು ಸಿಡಿದೆದ್ದಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ, “ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ” ಎಂದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಿಬಿಎಂಪಿ ಪೌರಕಾರ್ಮಿಕರ ಸಂಘವು ಖಂಡಿಸಿದೆ.

“2024ರ ಸೆಪ್ಟೆಂಬರ್ 11ರಂದು 72ನೇ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಹಿಳಾ ಪೌರಕಾರ್ಮಿಕರ ಮೇಲೆ ಸ್ಥಳೀಯರು ಭೀಕರವಾಗಿ ಹಲ್ಲೆ ಮಾಡಿ, ಸ್ಥಳೀಯ ನಿವಾಸಿಯಾದ ಚಂದ್ರು ಮತ್ತು ಅವರ ತಾಯಿ ಜಾತಿ ನಿಂದನೆ ಮಾಡಿ ಥಳಿಸಿದ್ದಾರೆ” ಎಂದು ಮಹಿಳಾ ಪೌಕಾರ್ಮಿಕರು ದೂರು ದಾಖಲಿಸಿದ್ದಾರೆ.

ಆರೋಪಿಗಳು ಜಾತಿ ಹೆಸರಿಡಿದು ಹಿಡಿದು ನಿಂದಿಸಿದ್ದೂ ಅಲ್ಲದೆ, ದೈಹಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ಮತ್ತೊಬ್ಬಾಕೆ ಪೌರಕಾರ್ಮಿಕರ ಮೇಲೆ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಫೋನನ್ನು ಒಡೆದುಹಾಕಿದ್ದಾರೆ. ಇತರೆ ಪೌರಕಾರ್ಮಿಕರನ್ನೂ ಅವರು ತಳಿಸಿದ್ದು ಅವರಿಗೂ ಗಾಯಗಳಾಗಿವೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೌರಕಾರ್ಮಿಕರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ; ಸ್ಥಳೀಯರ ಹಿಂಸಾಚಾರ ಹಾಗೂ ಘಟನೆ ಕುರಿತ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಪೌರಕಾರ್ಮಿಕರ ಸಂಘವು ಇಂದು ಪ್ರತಿಭಟನೆ ನಡೆಸಿದರು.

“ಪೌರಕಾರ್ಮಿಕರ ಕೆಲಸದ ಪರಿಸ್ಥಿತಿಯನ್ನು ಈ ಘಟನೆಯು ಎತ್ತಿತೋರಿಸುತ್ತದೆ. ಅವರ ಜಾತಿ, ಲಿಂಗ ಮತ್ತು ವರ್ಗದ ಮೇರೆಗೆ ಅವರುಗಳು ದಿನನಿತ್ಯ ಮುಪ್ಪಟ್ಟು ಶೋಷಣೆಯನ್ನು ಅನುಭವಿಸುತ್ತಾರೆ. ಸಾರ್ವಜನಿಕ ಅರೋಗ್ಯ ಸೇವೆಯಲ್ಲಿ ಅವರು ಅಗತ್ಯ ಸೇವೆ ಒದಗಿಸುತ್ತಿದ್ದರೂ ಸಹ, ತಾರತಮ್ಯ ಮತ್ತು ಹಿಂಸೆ ಇವರಿಗೆ ಮೀರಿದ್ದಲ್ಲ. ಇದನ್ನು ತುರ್ತಾಗಿ ಸರಿಪಡಿಸುವ ಅವಕ್ಷ್ಯಕತೆ ಇದೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ನಿರ್ಮಲಾ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.

ಘಟನೆಯಲ್ಲಿ ನೊಂದ ಪೌರಕಾರ್ಮಿಕರಾದ ಲಕ್ಷ್ಮಿ ಅವರು ಮಾತನಾಡಿ, “ಈ ಘಟಬೆಯು ನಮ್ಮ ಘನತೆಗೆ ಕುಂದುಂಟಾಗಿದೆ, ಅಧಿಕಾರಿಗಳು ಯಾವುದೇ ರೀತಿಯ ಜವಾಬ್ದಾರಿ ವಹಿಸಿರುವುದಿಲ್ಲ” ಎಂದು ಬೇಸರ ಹೊರಹಾಕಿದರು. “ಸಾರ್ವಜನಿಕವಾಗಿ ನನ್ನ ಘನತೆಗೆ ಧಕ್ಕೆಯನ್ನುಂಟು ಮಾಡಲಾಗಿದೆ. ಹೀಗಿದ್ದರೂ ಸಹ ಅಧಿಕಾರಿಗಳು ಯಾವುದೇ ರೀತಿ ಕ್ರಮ ಜರುಗಿಸದ ಕಾರಣ ನಮ್ಮಂತಹ ಕಾರ್ಮಿಕರ ಕುರಿತು ಅಧಿಕಾರಿಗಳಿಗಿರುವ ನಿರ್ಲಕ್ಷ್ಯವನ್ನು ಮತ್ತೆ ತೋರಿಸುತ್ತಿದ್ದಾರೆ” ಎಂದು ಹೇಳಿದರು.

ಇದೇ ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಪೌರಕಾರ್ಮಿಕರಾದ ಮುನಿರತ್ನ ಅವರು, “ನಮಗೆ ನ್ಯಾಯ ದೊರಕಬಾರದೇ? ನಾವು ದಲಿತ ಸಮುದಾಯದವರು ಮತ್ತು ಬಡ ಜನರು ಎಂದು ನಿರ್ಲಕ್ಷ್ಯ ತೋರಲಾಗುತ್ತಿದೆಯೇ? ನಮಗೂ ಸಮಾನವಾದ ನ್ಯಾಯ ದೊರಕಬೇಕು” ಎಂದರು.

“ಇದೊಂದೇ ಘಟನೆಯಲ್ಲ. ನಾವು ದಿನನಿತ್ಯ ಅಸ್ಪೃಶ್ಯತೆಯನ್ನು ಅನುಭವಿಸುತ್ತೇವೆ. ಮನೆಗಳ ಗೇಟ್ ಗಳನ್ನು ನಾವು ಮುಟ್ಟಬಾರದು, ನಾವು ಕುಡಿಯಲು ನೀರು ಕೇಳಿದಾಗ ಬಾತ್ರೂಮ್ ಚೊಂಬಿನಲ್ಲಿ ನೀರು ಕೊಡುತ್ತಾರೆ. ಈ ರೀತಿಯಲ್ಲಿ ನಾವು ತಾರತಮ್ಯ ಅನುಭವಿಸುತ್ತೇವೆ” ಎಂದು ಪೌರಕಾರ್ಮಿಕರಾದ ರಂಗಮ್ಮ ಹೇಳಿದರು.

“ಈ ಘಟನೆಯು ಬಿಬಿಎಂಪಿಯಲ್ಲಿರುವ ಆಳವಾದ ಮತ್ತು ವ್ಯವಸ್ಥಿತವಾದ ಸಮಸ್ಯೆಯನ್ನು ಎತ್ತಿತೋರಿಸುತ್ತದೆ. ದಲಿತ ಪೌರಕಾರ್ಮಿಕರ, ಅದರಲ್ಲೂ ಮಹಿಳಾ ಕಾರ್ಮಿಕರ, ಶೋಷಣೆಯುಕ್ತ ಕೆಲಸದ ವಾತಾವರಣ ಯಾವ ರೀತಿಯಲ್ಲಿ ಪ್ರತಿಪಾದಿಸಲಾಗುತ್ತಿದೆ ಮತ್ತು ಹೇಗೆ ಇದ್ದಕ್ಕಿದ್ದಂತೆ ಕೆಲಸದಿಂದ ವಜಾಗೊಳಿಸುವ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ ಎಂದು ತೋರಿಸುತ್ತದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಈ ಕೂಡಲೇ ಎಲ್ಲ ಪೌರಕಾರ್ಮಿಕರಿಗೆ ನ್ಯಾಯಯುತ ಮತ್ತು ಘನತೆಯುಕ್ತ ಕೆಲಸದ ವಾತಾವರಣವನ್ನು ರೂಪಿಸಬೇಕು” ಎಂದು ಎಐಸಿಸಿಟಿಯು ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಹೇಳಿದರು.

ಪೌರಕಾರ್ಮಿಕರ ಆಗ್ರಹಗಳೇನು?

ಬ್ಯಾಡರಹಳ್ಳಿ ಪೊಲೀಸರು ಶೀಘ್ರ ಕ್ರಮ ಕೈಗೊಂಡು ಆರೋಪಿಗಳನ್ನು ತಡಮಾಡದೆ ಬಂಧಿಸಬೇಕು. ಅನ್ಯಾಯವಾಗಿ ಹಲ್ಲೆ ಹಾಗೂ ದೌರ್ಜನ್ಯಕ್ಕೆ ಒಳಗಾದ ಪೌರಕಾರ್ಮಿಕರಿಗೆ ತಲಾ ₹10 ಲಕ್ಷ ಪರಿಹಾರ ದೊರಕಿಸಿಕೊಡಬೇಕು. ಪೌರಕಾರ್ಮಿಕರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅವರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವುದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು ಎಂದು ಪೌರಕಾರ್ಮಿಕರ ಸಂಘ ಆಗ್ರಹಿಸಿದೆ.

“ಸಾರ್ವಜನಿಕರಿಂದ ಇಂತಹ ಹಿಂಸಾತ್ಮಕ ದಾಳಿಗಳು ಮತ್ತು ಕಿರುಕುಳದಿಂದ ಪೌರ ಕಾರ್ಮಿಕರನ್ನು ರಕ್ಷಿಸುವುದು ಬಿಬಿಎಪಿಯ ಆದ್ಯ ಕರ್ತವ್ಯವಾಗಬೇಕು. ಈ ಘಟನೆಯ ಬಗ್ಗೆ ಚರ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ರೂಪಿಸಲು ನಮ್ಮ ಸಂಘಟನೆಯೊಂದಿಗೆ ತುರ್ತು ಸಭೆ ಕರೆಯಬೇಕು. ಬಿಬಿಎಂಪಿ, ಸರ್ಕಾರ ಈ ಘಟನೆಯ ಗಂಭೀರತೆಯನ್ನು ಪರಿಗಣಿಸಬೇಕು ಮತ್ತು ಸಾರ್ವಜನಿಕ ಆರೋಗ್ಯ ಮೂಲಸೌಕರ್ಯದ ಅತ್ಯಗತ್ಯ ಭಾಗವಾಗಿರುವ ಪೌರಕಾರ್ಮಿಕರನ್ನು ರಕ್ಷಿಸಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

ಇದನ್ನೂ ಓದಿ; ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್ (75) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...