Homeಕರ್ನಾಟಕತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ...

ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

- Advertisement -
- Advertisement -

ತಮ್ಮ ಮೇಲಿನ ಹಿಂಸಾಚಾರ, ಜಾತಿ ಹಾಗೂ ಲಿಂಗಾಧಾರಿತ ದೌರ್ಜನ್ಯ ಖಂಡಿಸಿ ಮಹಿಳಾ ಪೌರಕಾರ್ಮಿಕರು ಸಿಡಿದೆದ್ದಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ, “ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ” ಎಂದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಿಬಿಎಂಪಿ ಪೌರಕಾರ್ಮಿಕರ ಸಂಘವು ಖಂಡಿಸಿದೆ.

“2024ರ ಸೆಪ್ಟೆಂಬರ್ 11ರಂದು 72ನೇ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಹಿಳಾ ಪೌರಕಾರ್ಮಿಕರ ಮೇಲೆ ಸ್ಥಳೀಯರು ಭೀಕರವಾಗಿ ಹಲ್ಲೆ ಮಾಡಿ, ಸ್ಥಳೀಯ ನಿವಾಸಿಯಾದ ಚಂದ್ರು ಮತ್ತು ಅವರ ತಾಯಿ ಜಾತಿ ನಿಂದನೆ ಮಾಡಿ ಥಳಿಸಿದ್ದಾರೆ” ಎಂದು ಮಹಿಳಾ ಪೌಕಾರ್ಮಿಕರು ದೂರು ದಾಖಲಿಸಿದ್ದಾರೆ.

ಆರೋಪಿಗಳು ಜಾತಿ ಹೆಸರಿಡಿದು ಹಿಡಿದು ನಿಂದಿಸಿದ್ದೂ ಅಲ್ಲದೆ, ದೈಹಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ಮತ್ತೊಬ್ಬಾಕೆ ಪೌರಕಾರ್ಮಿಕರ ಮೇಲೆ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಫೋನನ್ನು ಒಡೆದುಹಾಕಿದ್ದಾರೆ. ಇತರೆ ಪೌರಕಾರ್ಮಿಕರನ್ನೂ ಅವರು ತಳಿಸಿದ್ದು ಅವರಿಗೂ ಗಾಯಗಳಾಗಿವೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೌರಕಾರ್ಮಿಕರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ; ಸ್ಥಳೀಯರ ಹಿಂಸಾಚಾರ ಹಾಗೂ ಘಟನೆ ಕುರಿತ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಪೌರಕಾರ್ಮಿಕರ ಸಂಘವು ಇಂದು ಪ್ರತಿಭಟನೆ ನಡೆಸಿದರು.

“ಪೌರಕಾರ್ಮಿಕರ ಕೆಲಸದ ಪರಿಸ್ಥಿತಿಯನ್ನು ಈ ಘಟನೆಯು ಎತ್ತಿತೋರಿಸುತ್ತದೆ. ಅವರ ಜಾತಿ, ಲಿಂಗ ಮತ್ತು ವರ್ಗದ ಮೇರೆಗೆ ಅವರುಗಳು ದಿನನಿತ್ಯ ಮುಪ್ಪಟ್ಟು ಶೋಷಣೆಯನ್ನು ಅನುಭವಿಸುತ್ತಾರೆ. ಸಾರ್ವಜನಿಕ ಅರೋಗ್ಯ ಸೇವೆಯಲ್ಲಿ ಅವರು ಅಗತ್ಯ ಸೇವೆ ಒದಗಿಸುತ್ತಿದ್ದರೂ ಸಹ, ತಾರತಮ್ಯ ಮತ್ತು ಹಿಂಸೆ ಇವರಿಗೆ ಮೀರಿದ್ದಲ್ಲ. ಇದನ್ನು ತುರ್ತಾಗಿ ಸರಿಪಡಿಸುವ ಅವಕ್ಷ್ಯಕತೆ ಇದೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ನಿರ್ಮಲಾ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.

ಘಟನೆಯಲ್ಲಿ ನೊಂದ ಪೌರಕಾರ್ಮಿಕರಾದ ಲಕ್ಷ್ಮಿ ಅವರು ಮಾತನಾಡಿ, “ಈ ಘಟಬೆಯು ನಮ್ಮ ಘನತೆಗೆ ಕುಂದುಂಟಾಗಿದೆ, ಅಧಿಕಾರಿಗಳು ಯಾವುದೇ ರೀತಿಯ ಜವಾಬ್ದಾರಿ ವಹಿಸಿರುವುದಿಲ್ಲ” ಎಂದು ಬೇಸರ ಹೊರಹಾಕಿದರು. “ಸಾರ್ವಜನಿಕವಾಗಿ ನನ್ನ ಘನತೆಗೆ ಧಕ್ಕೆಯನ್ನುಂಟು ಮಾಡಲಾಗಿದೆ. ಹೀಗಿದ್ದರೂ ಸಹ ಅಧಿಕಾರಿಗಳು ಯಾವುದೇ ರೀತಿ ಕ್ರಮ ಜರುಗಿಸದ ಕಾರಣ ನಮ್ಮಂತಹ ಕಾರ್ಮಿಕರ ಕುರಿತು ಅಧಿಕಾರಿಗಳಿಗಿರುವ ನಿರ್ಲಕ್ಷ್ಯವನ್ನು ಮತ್ತೆ ತೋರಿಸುತ್ತಿದ್ದಾರೆ” ಎಂದು ಹೇಳಿದರು.

ಇದೇ ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಪೌರಕಾರ್ಮಿಕರಾದ ಮುನಿರತ್ನ ಅವರು, “ನಮಗೆ ನ್ಯಾಯ ದೊರಕಬಾರದೇ? ನಾವು ದಲಿತ ಸಮುದಾಯದವರು ಮತ್ತು ಬಡ ಜನರು ಎಂದು ನಿರ್ಲಕ್ಷ್ಯ ತೋರಲಾಗುತ್ತಿದೆಯೇ? ನಮಗೂ ಸಮಾನವಾದ ನ್ಯಾಯ ದೊರಕಬೇಕು” ಎಂದರು.

“ಇದೊಂದೇ ಘಟನೆಯಲ್ಲ. ನಾವು ದಿನನಿತ್ಯ ಅಸ್ಪೃಶ್ಯತೆಯನ್ನು ಅನುಭವಿಸುತ್ತೇವೆ. ಮನೆಗಳ ಗೇಟ್ ಗಳನ್ನು ನಾವು ಮುಟ್ಟಬಾರದು, ನಾವು ಕುಡಿಯಲು ನೀರು ಕೇಳಿದಾಗ ಬಾತ್ರೂಮ್ ಚೊಂಬಿನಲ್ಲಿ ನೀರು ಕೊಡುತ್ತಾರೆ. ಈ ರೀತಿಯಲ್ಲಿ ನಾವು ತಾರತಮ್ಯ ಅನುಭವಿಸುತ್ತೇವೆ” ಎಂದು ಪೌರಕಾರ್ಮಿಕರಾದ ರಂಗಮ್ಮ ಹೇಳಿದರು.

“ಈ ಘಟನೆಯು ಬಿಬಿಎಂಪಿಯಲ್ಲಿರುವ ಆಳವಾದ ಮತ್ತು ವ್ಯವಸ್ಥಿತವಾದ ಸಮಸ್ಯೆಯನ್ನು ಎತ್ತಿತೋರಿಸುತ್ತದೆ. ದಲಿತ ಪೌರಕಾರ್ಮಿಕರ, ಅದರಲ್ಲೂ ಮಹಿಳಾ ಕಾರ್ಮಿಕರ, ಶೋಷಣೆಯುಕ್ತ ಕೆಲಸದ ವಾತಾವರಣ ಯಾವ ರೀತಿಯಲ್ಲಿ ಪ್ರತಿಪಾದಿಸಲಾಗುತ್ತಿದೆ ಮತ್ತು ಹೇಗೆ ಇದ್ದಕ್ಕಿದ್ದಂತೆ ಕೆಲಸದಿಂದ ವಜಾಗೊಳಿಸುವ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ ಎಂದು ತೋರಿಸುತ್ತದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಈ ಕೂಡಲೇ ಎಲ್ಲ ಪೌರಕಾರ್ಮಿಕರಿಗೆ ನ್ಯಾಯಯುತ ಮತ್ತು ಘನತೆಯುಕ್ತ ಕೆಲಸದ ವಾತಾವರಣವನ್ನು ರೂಪಿಸಬೇಕು” ಎಂದು ಎಐಸಿಸಿಟಿಯು ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಹೇಳಿದರು.

ಪೌರಕಾರ್ಮಿಕರ ಆಗ್ರಹಗಳೇನು?

ಬ್ಯಾಡರಹಳ್ಳಿ ಪೊಲೀಸರು ಶೀಘ್ರ ಕ್ರಮ ಕೈಗೊಂಡು ಆರೋಪಿಗಳನ್ನು ತಡಮಾಡದೆ ಬಂಧಿಸಬೇಕು. ಅನ್ಯಾಯವಾಗಿ ಹಲ್ಲೆ ಹಾಗೂ ದೌರ್ಜನ್ಯಕ್ಕೆ ಒಳಗಾದ ಪೌರಕಾರ್ಮಿಕರಿಗೆ ತಲಾ ₹10 ಲಕ್ಷ ಪರಿಹಾರ ದೊರಕಿಸಿಕೊಡಬೇಕು. ಪೌರಕಾರ್ಮಿಕರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅವರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವುದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು ಎಂದು ಪೌರಕಾರ್ಮಿಕರ ಸಂಘ ಆಗ್ರಹಿಸಿದೆ.

“ಸಾರ್ವಜನಿಕರಿಂದ ಇಂತಹ ಹಿಂಸಾತ್ಮಕ ದಾಳಿಗಳು ಮತ್ತು ಕಿರುಕುಳದಿಂದ ಪೌರ ಕಾರ್ಮಿಕರನ್ನು ರಕ್ಷಿಸುವುದು ಬಿಬಿಎಪಿಯ ಆದ್ಯ ಕರ್ತವ್ಯವಾಗಬೇಕು. ಈ ಘಟನೆಯ ಬಗ್ಗೆ ಚರ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ರೂಪಿಸಲು ನಮ್ಮ ಸಂಘಟನೆಯೊಂದಿಗೆ ತುರ್ತು ಸಭೆ ಕರೆಯಬೇಕು. ಬಿಬಿಎಂಪಿ, ಸರ್ಕಾರ ಈ ಘಟನೆಯ ಗಂಭೀರತೆಯನ್ನು ಪರಿಗಣಿಸಬೇಕು ಮತ್ತು ಸಾರ್ವಜನಿಕ ಆರೋಗ್ಯ ಮೂಲಸೌಕರ್ಯದ ಅತ್ಯಗತ್ಯ ಭಾಗವಾಗಿರುವ ಪೌರಕಾರ್ಮಿಕರನ್ನು ರಕ್ಷಿಸಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

ಇದನ್ನೂ ಓದಿ; ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್ (75) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...