Homeಕರ್ನಾಟಕಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವೆಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು 

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದರು.

ಪೌರ ಕಾರ್ಮಿಕರ ಸಂಬಳ 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದೇವೆ

ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಳ್ಳತನ ಆರೋಪ | ದಲಿತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿ, ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...