Homeಮುಖಪುಟಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ಚಿತ್ರಹಿಂಸೆಗೊಳಗಾಗಿ ಹತ್ಯೆಯಾದ ಮೂವರು ನಾಗರಿಕರ ಕುಟುಂಬಸ್ಥರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿದ್ದಾರೆ.

ಸಂತ್ರಸ್ತರ ಕುಟುಂಬದ ಸದಸ್ಯರನ್ನು ಪೂಂಛ್‌ ಜಿಲ್ಲೆಯ ಟೋಪಾ ಪಿರ್ ಗ್ರಾಮದಿಂದ ರಾಜೌರಿಗೆ ರಾಜನಾಥ್ ಸಿಂಗ್ ಅವರ ಭೇಟಿಗೆ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮೂವರು ನಾಗರಿಕರ ಚಿತ್ರಹಿಂಸೆ ಮತ್ತು ಸಾವಿನಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ನೀಡುವಂತೆ ಸಚಿವರಲ್ಲಿ ಸಂತ್ರಸ್ತ ಕುಟುಂಬ ಕೇಳಿಕೊಂಡಿದೆ. ಇದೇ ವೇಳೆ ಸಚಿವರು ನ್ಯಾಯದ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಹಾಗೂ ಸೂರಂಕೋಟೆಯಲ್ಲಿ ನಿವೇಶನ ನೀಡುವುದಾಗಿ ಸಂತ್ರಸ್ತ ಕುಟುಂಬಕ್ಕೆ ಈಗಾಗಲೇ ಜಿಲ್ಲಾಡಳಿತ ಭರವಸೆ ನೀಡಿದೆ. ಇದರಲ್ಲಿ ಈಗಾಗಲೇ ತಲಾ 10 ಲಕ್ಷ ರೂ.ಗಳ ಚೆಕ್‌ಗಳನ್ನು ಪಾವತಿಸಿದೆ.

ಕಳೆದ ತಿಂಗಳು ರಜೌರಿಯ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೇನಾ ಯೋಧರು ಹತರಾದ ನಂತರ ರಾಜನಾಥ್‌ ಸಿಂಗ್ ಅವರು ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿನ  ಪರಿಸ್ಥಿತಿಯ ಬಗ್ಗೆ ಹಿರಿಯ ಸೇನಾ ಅಧಿಕಾರಿಗಳು ರಕ್ಷಣಾ ಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ.

ನಿನ್ನೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಜಿಲ್ಲೆಯ ಟೋಪಾ ಪಿರ್ ಗ್ರಾಮದಲ್ಲಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು ಮತ್ತು ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದರು. ಭದ್ರತಾ ಪಡೆಗಳು ತಮ್ಮೊಂದಿಗಿದ್ದಾರೆ ಎಂದು ಕುಟುಂಬಗಳಿಗೆ ಭರವಸೆ ನೀಡಿದ ಅವರು ಈಗಾಗಲೇ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಕೆಲವು ಅಧಿಕಾರಿಗಳನ್ನು ತಮ್ಮ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...