Homeಮುಖಪುಟಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ಚಿತ್ರಹಿಂಸೆಗೊಳಗಾಗಿ ಹತ್ಯೆಯಾದ ಮೂವರು ನಾಗರಿಕರ ಕುಟುಂಬಸ್ಥರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿದ್ದಾರೆ.

ಸಂತ್ರಸ್ತರ ಕುಟುಂಬದ ಸದಸ್ಯರನ್ನು ಪೂಂಛ್‌ ಜಿಲ್ಲೆಯ ಟೋಪಾ ಪಿರ್ ಗ್ರಾಮದಿಂದ ರಾಜೌರಿಗೆ ರಾಜನಾಥ್ ಸಿಂಗ್ ಅವರ ಭೇಟಿಗೆ ಅಧಿಕಾರಿಗಳು ಕರೆತಂದಿದ್ದರು. ಈ ವೇಳೆ ಮೂವರು ನಾಗರಿಕರ ಚಿತ್ರಹಿಂಸೆ ಮತ್ತು ಸಾವಿನಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ನೀಡುವಂತೆ ಸಚಿವರಲ್ಲಿ ಸಂತ್ರಸ್ತ ಕುಟುಂಬ ಕೇಳಿಕೊಂಡಿದೆ. ಇದೇ ವೇಳೆ ಸಚಿವರು ನ್ಯಾಯದ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿದೆ.

ಮೃತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಹಾಗೂ ಸೂರಂಕೋಟೆಯಲ್ಲಿ ನಿವೇಶನ ನೀಡುವುದಾಗಿ ಸಂತ್ರಸ್ತ ಕುಟುಂಬಕ್ಕೆ ಈಗಾಗಲೇ ಜಿಲ್ಲಾಡಳಿತ ಭರವಸೆ ನೀಡಿದೆ. ಇದರಲ್ಲಿ ಈಗಾಗಲೇ ತಲಾ 10 ಲಕ್ಷ ರೂ.ಗಳ ಚೆಕ್‌ಗಳನ್ನು ಪಾವತಿಸಿದೆ.

ಕಳೆದ ತಿಂಗಳು ರಜೌರಿಯ ಕಂಡಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೇನಾ ಯೋಧರು ಹತರಾದ ನಂತರ ರಾಜನಾಥ್‌ ಸಿಂಗ್ ಅವರು ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿನ  ಪರಿಸ್ಥಿತಿಯ ಬಗ್ಗೆ ಹಿರಿಯ ಸೇನಾ ಅಧಿಕಾರಿಗಳು ರಕ್ಷಣಾ ಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ.

ನಿನ್ನೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಜಿಲ್ಲೆಯ ಟೋಪಾ ಪಿರ್ ಗ್ರಾಮದಲ್ಲಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು ಮತ್ತು ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದರು. ಭದ್ರತಾ ಪಡೆಗಳು ತಮ್ಮೊಂದಿಗಿದ್ದಾರೆ ಎಂದು ಕುಟುಂಬಗಳಿಗೆ ಭರವಸೆ ನೀಡಿದ ಅವರು ಈಗಾಗಲೇ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಕೆಲವು ಅಧಿಕಾರಿಗಳನ್ನು ತಮ್ಮ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...