Homeಮುಖಪುಟಇಸ್ರೇಲ್ ಬಾಂಬ್‌ ದಾಳಿಯನ್ನು ನಿಲ್ಲಿಸಿದರೆ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುತ್ತೇವೆ: ಹಮಾಸ್

ಇಸ್ರೇಲ್ ಬಾಂಬ್‌ ದಾಳಿಯನ್ನು ನಿಲ್ಲಿಸಿದರೆ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುತ್ತೇವೆ: ಹಮಾಸ್

- Advertisement -
- Advertisement -

ಇಸ್ರೇಲ್ ಗಾಝಾದ ಮೇಲೆ ಬಾಂಬ್‌ ದಾಳಿಯನ್ನು ನಿಲ್ಲಿಸಿದರೆ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆಗಳಿಸುವುದಾಗಿ ಹಮಾಸ್‌ ಹೇಳಿದ್ದು, ಅಪಾರ ಸಾವು-ನೋವಿನ ಬಳಿಕ ಹಮಾಸ್ ಸಶಸ್ತ್ರ ಗುಂಪು ಯದ್ಧ ನಿಲ್ಲಿಸುವಂತೆ ಇಸ್ರೇಲ್‌ಗೆ ಆಗ್ರಹಿಸುತ್ತಿದೆ ಎಂದು ವರದಿ ತಿಳಿಸಿದೆ.

ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಷರತ್ತಿನ ಮೇಲೆ ಬಿಡುಗಡೆ ಮಾಡಲು ಬದ್ಧವಾಗಿದೆ. ಇಸ್ರೇಲ್ ಗಾಝಾದ ಮೇಲೆ ತನ್ನ ವೈಮಾನಿಕ ದಾಳಿಯನ್ನು ನಿಲ್ಲಿಸಿದರೆ ಸಶಸ್ತ್ರ ಗುಂಪು ಎಲ್ಲಾ ಒತ್ತೆಯಾಳು ನಾಗರಿಕರನ್ನು ತಕ್ಷಣವೇ ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಹಮಾಸ್ ಹಿರಿಯ ಅಧಿಕಾರಿಯೊಬ್ಬರು ಎನ್‌ಬಿಸಿ ನ್ಯೂಸ್‌ಗೆ ಹೇಳಿದ್ದಾರೆ.

ಇಸ್ರೇಲಿ ಪಡೆಗಳು ಗಾಝಾ ಪಟ್ಟಿ ಮೇಲಿನ ಸೇನಾ ದಾಳಿಯನ್ನು ಸ್ಥಗಿತಗೊಳಿಸಿದರೆ ಒಂದು ಗಂಟೆಯೊಳಗೆ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ವರದಿ ಹೇಳಿದೆ.

ಹಮಾಸ್‌ನ ಪ್ರಬಲ ನಾಯಕ ಖಾಲಿದ್ ಮೆಶಾಲ್ ಈ ಕುರಿತು ಸ್ಕೈ ನ್ಯೂಸ್‌ಗೆ ಪ್ರತಿಕ್ರಿಯಿಸಿದ್ದು, ಇಸ್ರೇಲ್ ಸೇನೆ ಗಾಝಾ ಪ್ರದೇಶದ ಮೇಲೆ ನಡೆಸುತ್ತಿರುವ ನಿರಂತರ ಬಾಂಬ್ ದಾಳಿಯನ್ನು ನಿಲ್ಲಿಸಿದರೆ ಹಮಾಸ್ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಸಿದ್ಧ ಎಂದು ಹೇಳಿದ್ದಾರೆ.

ಅವರು ಆಕ್ರಮಣವನ್ನು ಅಂತ್ಯಗೊಳಿಸಲಿ ಮತ್ತೆ ಖತರ್, ಈಜಿಪ್ಟ್ , ಅರಬ್ ದೇಶಗಳು ಹಾಗೂ ಇತರರ ಮಧ್ಯಸ್ಥಿಕೆಯಿಂದ ಒತ್ತೆಯಾಳುಗಳ ಬಿಡುಗಡೆಗೆ ದಾರಿ ಹುಡುಕಬಹುದಾಗಿದೆ ಎಂದು ಹಮಾಸ್‌ ರಾಜಕೀಯ ವಿಭಾಗದ ಮುಖ್ಯಸ್ಥರಾಗಿರುವ ಮೆಶಾಲ್ ಹೇಳಿದ್ದಾರೆ.

ಇಸ್ರೇಲ್‌ನ ವಾಯುದಾಳಿಯು ತೀವ್ರವಾಗಿದ್ದಾಗ ಒತ್ತೆಯಾಳುಗಳ ಬಿಡುಗಡೆ ಸಾಧ್ಯವಿಲ್ಲ ಎಂದು ಅವರು ಹೇಳಿದರು. ನಾವು ಯಾದೃಚ್ಛಿಕ ಬಾಂಬ್ ಸ್ಫೋಟಗಳು, ನರಮೇಧವನ್ನು ನಿಲ್ಲಿಸಲು ಬಯಸುತ್ತೇವೆ. ಬಳಿಕ ಸೈನಿಕರು ಅವರನ್ನು ಒತ್ತ ಇಟ್ಟ ಸ್ಥಳಗಳಿಂದ ಕರೆದೊಯ್ದು ರೆಡ್ ಕ್ರಾಸ್ ಅಥವಾ ಇನ್ನಿತರ ಯಾರಿಗಾದರೂ ಹಸ್ತಾಂತರಿಸಬಹುದು ಎಂದು ಹೇಳಿದ್ದಾರೆ.

ಇಸ್ರೇಲ್‌ನ ಮಿಲಿಟರಿ ಇತ್ತೀಚೆಗೆ ಗಾಝಾ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಕೃತ್ಯದಲ್ಲಿ 500ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. ಅ.7ರಂದು ಆರಂಭವಾದ ಯುದ್ಧದ ಬಳಿಕ ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ 5000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...