Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...