Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...