Homeಮುಖಪುಟನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಹೊಸ ವರದಿ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರಿಗೆ ಪತ್ರ ಬರೆದಿರುವ ಸಿಜೆಐ ಸಂಜೀವ್ ಖನ್ನಾ ಅವರು, ಹೊಸ ವರದಿ ನೀಡುವಂತೆ ಕೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ವಿವಾದಾತ್ಮಕ ಭಾಷಣ ಸಂಬಂಧ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾದ ಎರಡು ವಾರಗಳ ಬಳಿಕ ಈ ಬೆಳವಣಿಗೆ ನಡೆದಿದೆ.

ಡಿಸೆಂಬರ್ 17ರಂದು ನ್ಯಾಯಾಧೀಶ ಯಾದವ್ ಅವರು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು. ಈ ವೇಳೆ ಅವರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆಯೇ? ಇಲ್ಲಾ ಕ್ಷಮೆ ಯಾಚನೆ ಮಾಡಿದ್ದಾರೆಯೇ? ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಕೊಲಿಜಿಯಂ ನ್ಯಾ. ಯಾದವ್ ಅವರಿಗೆ ಎಚ್ಚರಿಕೆ ನೀಡಿ ಕಳಿಸಿದೆ ಎಂದು ಕೆಲ ಮಾಧ್ಯಮ ವರದಿಗಳು ತಿಳಿಸಿವೆ.

ಇದೀಗ ಸಿಜೆಐ ಹೊಸ ವರದಿ ಕೇಳಿರುವುದು ನ್ಯಾ. ಯಾದವ್ ವಿರುದ್ದ ಆಂತರಿಕ ಕ್ರಮ ಕೈಗೊಳ್ಳುವ ಮೊದಲ ಹೆಜ್ಜೆಯಾಗಿರಬಹುದು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

1995ರ ಸಿ ರವಿಚಂದ್ರನ್ ಅಯ್ಯರ್ VS ನ್ಯಾಯಮೂರ್ತಿ ಎ.ಎಂ ಭಟ್ಟಾಚಾರ್ಜಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಹೈಕೋರ್ಟ್ ನ್ಯಾಯಾಧೀಶರ ವಿರುದ್ದ ಆರೋಪ ಕೇಳಿ ಬಂದಾಗ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರೋಪಿತರ ವಿಚಾರಣೆ ನಡೆಸಬೇಕು. ನಂತರ ಈ ಕುರಿತು ಸಿಜೆಐ ಜೊತೆ ಸಮಾಲೋಚನೆ ಮಾಡಬೇಕು.

ಈ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ.ಎಂ. ಭಟ್ಟಾಚಾರ್ಜಿ ವಿರುದ್ಧ ಹಣಕಾಸಿನ ಅಕ್ರಮದ ಆರೋಪಗಳಿದ್ದವು. ಇಲ್ಲಿ ನ್ಯಾಯಾಲಯವು “ಕೆಟ್ಟ ನಡವಳಿಕೆ ಮತ್ತು ದೋಷಾರೋಪಣೆಗೆ ಅರ್ಹವಲ್ಲದ ಆರೋಪದ ನಡುವಿನ ಅಂತರ”ವನ್ನು ಪರಿಗಣಿಸಿತ್ತು.

ಆರೋಪಗಳು ಕೇಳಿ ಬಂದ ನಂತರ ನ್ಯಾಯಮೂರ್ತಿ ಭಟ್ಟಾಚಾರ್ಜಿ ರಾಜೀನಾಮೆ ನೀಡಿದ್ದರೂ, ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಕಾನೂನನ್ನು ರೂಪಿಸಿತು. ಭವಿಷ್ಯದ ಇಂತಹ ಪ್ರಕರಣಗಳಿಗೆ ಅದು ಮಾರ್ಗಸೂಚಿಯಾಯಿತು.

ಮಾರ್ಗಸೂಚಿ ಪ್ರಕಾರ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಿಂದ ಬಂದ ವರದಿಯನ್ನು ಅಧ್ಯಯನ ಮಾಡಿದ ಬಳಿಕ, ನ್ಯಾಯಾಧೀಶರ ವಿರುದ್ದದ ಆರೋಪ ರುಜುವಾತಾದರೆ ಸಿಜೆಐ ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು.

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ 2024ರ ಡಿಸೆಂಬರ್ 8ರಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ಮುಸ್ಲಿಂ ಗುರಿಯಾಗಿಸಿ ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಇದೆ ತಿಂಗಳು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...