Homeಮುಖಪುಟನ್ಯಾ. ಯಶವಂತ್ ವರ್ಮಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

ನ್ಯಾ. ಯಶವಂತ್ ವರ್ಮಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

- Advertisement -
- Advertisement -

ದೆಹಲಿಯ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ನೀಡಿದ ವರದಿ ಪ್ರಶ್ನಿಸಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ.

ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆಗೊಂಡಿರುವ ನ್ಯಾ. ಯಶವಂತ್ ವರ್ಮಾ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರ ಸರ್ಕಾರಿ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು.

ಈ ಬಗ್ಗೆ ತನಿಖೆ ನಡೆಸಲು ನೇಮಿಸಿದ್ದ ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ, ಹಣ ಪತ್ತೆಯಾಗಿರುವುದನ್ನು ದೃಢೀಕರಿಸಿ ವರದಿ ನೀಡಿತ್ತು. ಈ ವರದಿಯನ್ನು ಪ್ರಶ್ನಿಸಿ ನ್ಯಾ. ವರ್ಮಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ನ್ಯಾ.ವರ್ಮಾ ಅವರ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡುವಂತೆ ಅವರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಬುಧವಾರ ಸಿಜೆಐ ಮುಂದೆ ಮನವಿ ಮಾಡಿದ್ದರು.

ಈ ಪ್ರಕರಣ ಕೆಲವು ಸಾಂವಿಧಾನಿಕ ಬಿಕ್ಕಟ್ಟುಗಳಿಗೆ ಕಾರಣವಾಗಲಿದೆ. ಆದ್ದರಿಂದ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ನಾನು ಕೂಡ ಆಂತರಿಕ ಸಮಿತಿಯ ಭಾಗವಾಗಿದ್ದರಿಂದ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ನಾವು ಇದನ್ನು ಪಟ್ಟಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ನ್ಯಾ. ವರ್ಮಾ ಅವರು, ಮಾಜಿ ಸಿಜೆಐ ಸಂಜೀವ್ ಖನ್ನಾ ಅವರು ಹೈಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ತನ್ನನ್ನು ವಜಾಗೊಳಿಸುವಂತೆ ಮಾಡಿದ ಶಿಫಾರಸನ್ನು ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಎಂಬುವುದಾಗಿ ಘೋಷಿಸುವಂತೆ ಕೋರಿದ್ದಾರೆ.

ಆಂತರಿಕ ಸಮಿತಿ ರಚಿಸಿದ್ದನ್ನು ನ್ಯಾ, ವರ್ಮಾ ಪ್ರಶ್ನಿಸಿದ್ದು, ಹೈಕೋರ್ಟ್ ನ್ಯಾಯಾಧೀಶರನ್ನು ತೆಗೆದುಹಾಕುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ. ಆದ್ದರಿಂದ ಆಂತರಿಕ ಸಮಿತಿ ರಚಿಸಿರುವ ಸುಪ್ರೀಂ ಕೋರ್ಟ್‌ನ ನಡೆ ಅಸಂವಿಧಾನಿಕ ಎಂದು ಅವರು ವಾದಿಸಿದ್ದಾರೆ.

ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968 ರ ಅಡಿಯಲ್ಲಿ ಒದಗಿಸಲಾದ ಸುರಕ್ಷತಾ ಕ್ರಮಗಳಡಿ ಆಂತರಿಕ ಕಾರ್ಯವಿಧಾನವು ಹೊಂದಿಲ್ಲ ಎಂದಿದ್ದಾರೆ.

ಈ ನಡುವೆ ಅತ್ತ ಸಂಸತ್ತಿನಲ್ಲಿ ನ್ಯಾ. ವರ್ಮಾ ಅವರನ್ನು ಪದಚ್ಯುತಗೊಳಿಸುವ ಸಲುವಾಗಿ ನಿರ್ಣಯ ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

ಪ್ರಕರಣದ ಹಿನ್ನೆಲೆ : ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

2006ರ ಮುಂಬೈ ರೈಲು ಸ್ಫೋಟ ಪ್ರಕರಣ: 12 ಜನರ ಖುಲಾಸೆ ನಂತರ ಕಾಂಗ್ರೆಸ್ ಕ್ಷಮೆಗೆ ಜಮಿಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...