Homeಮುಖಪುಟಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್

ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರಾದ ಡಿ.ವೈ ಚಂದ್ರಚೂಡ್‌ರವರು ಸ್ಟ್ಯಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಪೀಠದಲ್ಲಿ ಜಸ್ಟಿಸ್ ಚಂದ್ರಚೂಡ್‌ರವರು ಸಹ ಇದ್ದರು. ಆ ಜಾಮೀನು ತೀರ್ಪನ್ನು ಟೀಕಿಸಿದ ಕಾರಣಕ್ಕಾಗಿಯೇ ಕುನಾಲ್ ಕಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಹಾಗಾಗಿ ತಾನೇ ನೀಡಿದ ತೀರ್ಪನ್ನು ಟೀಕಿಸಿದ ವ್ಯಕ್ತಿಯ ವಿರುದ್ಧದ ವಿಚಾರಣೆಯನ್ನು ತಾನೇ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಚಂದ್ರಚೂಡ್‌ರವರು ವಿಚಾರಣೆಯಿಂದ ಹೊರಗುಳಿದಿದ್ದಾರೆ.

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದನ್ನು ಟೀಕಿಸಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯಾ ಪತ್ರದಲ್ಲಿ ಅರ್ನಾಬ್ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ಈ ಪ್ರಕರಣ ವರ್ಷಕ್ಕೂ ಮೊದಲೇ ಮುಚ್ಚಿಹೋಗಿತ್ತು. ಈಗ ಮತ್ತೆ ಅದಕ್ಕೆ ಮರುಜೀವ ನೀಡಿದ ಮುಂಬೈ ಪೊಲೀಸರು 2020ರಲ್ಲಿ ಅರ್ನಾಬ್‌ ಅವರನ್ನು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಜಾಮೀನು ಪಡೆಯುವ ಸಲುವಾಗಿ ಅವರು ಬಾಂಬೆ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಅದು ಜಾಮೀನು ನಿರಾಕರಿಸಿತ್ತು. ಹಾಗಾಗಿ ಅರ್ನಾಬ್ ಸುಪ್ರೀಂ ಮೆಟ್ಟಿಲೇರಿದ್ದರು.

ಆಗ ಸುಪ್ರಿಂ ಕೋರ್ಟ್‌ ನ್ಯಾಯಾಧೀಶರಾಗಿದ್ದ ಚಂದ್ರಚೂಡ್‌ರವರು ಜಾಮೀನು ನೀಡಿದ್ದರು. ಕೇವಲ ಒಂದು ವಾರದಲ್ಲಿ ಅವರ ಅರ್ಜಿಯನ್ನು ಏಕೆ ಪರಿಗಣಿಸಲಾಯಿತು? ಬೇರೆ ಹೋರಾಟಗಾರರ ಅರ್ಜಿಗಳು ವಿಚಾರಣೆಗೆ ಬರುವುದಿಲ್ಲ ಏಕೆ ಎಂಬ ಪ್ರಶ್ನೆ ಎದ್ದಿತ್ತು.

ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಾಮಿಡಿಯನ್ ಕುನಾಲ್ ಕಮ್ರಾ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು.

ಕುನಾಲ್ ಕಮ್ರ ವಿರುದ್ಧ ಎಂಟು ಜನರಿಗೆ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು  ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅನುಮತಿ ನೀಡುವ ಮೂಲಕ, ಕಮ್ರ ತಮಾಷೆಯ ಗೆರೆಯನ್ನು ದಾಟಿದ್ದಾರೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಮೇಲೆ ಅನ್ಯಾಯವಾಗಿ ಕೆಟ್ಟ ರೀತಿಯಲ್ಲಿ ದಾಳಿ ಮಾಡುವುದು ಶಿಕ್ಷೆಗೆ ಕಾರಣವಾಗುತ್ತದೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ ಇದು” ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ಅವರು  ಕಮ್ರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲು ತಮ್ಮ ಅನುಮತಿಯನ್ನು ಕೇಳಿದ ವಕೀಲರಿಗೆ ಉತ್ತರಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷಮೆ ಕೇಳಿದರೆ ಪ್ರಕರಣ ಕೈಬಿಡುವುದಾಗಿ ಅಟಾರ್ನಿ ಜನರಲ್ ತಿಳಿಸಿದ್ದರು. ಅದರೆ ಪ್ರಕರಣದ ಕುರಿತು ಮತ್ತೆ ಟ್ವೀಟ್ ಮಾಡಿದ್ದ ಕಮ್ರಾ, ’ನನ್ನ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವ ಅಥವಾ ಅವರಲ್ಲಿ ಕ್ಷಮೆಯಾಚಿಸುವ ಉದ್ದೇಶ ನನಗಿಲ್ಲ. ಅವು ತಮ್ಮಷ್ಟಕ್ಕೇ ಹೇಳಬೇಕಾದುದ್ದನ್ನು ಹೇಳುತ್ತವೆ ಎಂದು ನಾನು ನಂಬುತ್ತೇನೆ” ಎಂದಿದ್ದರು. ಜೊತೆಗೆ “ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಸಮಯ ಹಾಳು ಮಾಡಲ್ಲ” ಎಂದು ತಮ್ಮ ಪತ್ರದೊಂದಿಗೆ ಅಟರ್ನಿ ಜನರಲ್ ವೇಣುಗೋಪಾಲ್ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?: ನಾಯಿಮರಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...