Homeಮುಖಪುಟಪೊಲೀಸರ ದೌರ್ಜನ್ಯ ವಿಚಾರಣೆಗೆ ಹೈಕೋರ್ಟ್‌‌ನಲ್ಲಿ ಸಮಿತಿ: ಸಿಜೆಐ

ಪೊಲೀಸರ ದೌರ್ಜನ್ಯ ವಿಚಾರಣೆಗೆ ಹೈಕೋರ್ಟ್‌‌ನಲ್ಲಿ ಸಮಿತಿ: ಸಿಜೆಐ

- Advertisement -
- Advertisement -

ಅಧಿಕಾರಿಗಳಿಂದ, ಮುಖ್ಯವಾಗಿ ಪೊಲೀಸರಿಂದ ಸಾಮಾನ್ಯ ಜನರಿಗೆ ಆಗುವ ದೌರ್ಜನ್ಯಗಳನ್ನು ತನಿಖೆ ಮಾಡಲು ಹೈಕೋರ್ಟ್‌‌ಗಳ ಮುಖ್ಯ ನ್ಯಾಯಾಧೀಶ ನೇತೃತ್ವದಲ್ಲಿ ಸ್ಥಾಯಿ ಸಮಿತಿ ರಚಿಸಲು ಒಪ್ಪಿಗೆ ಇದೆ ಎಂದು ಸುಪ್ರೀಂ ಕೋರ್ಟ್‌‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌.ವಿ.ರಮಣ ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳೂ ತೀವ್ರತರನಾದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದನ್ನು ಸಿಜೆಐ ಗಮನಿಸಿದ್ದಾರೆ. ಉತ್ತರಪ್ರದೇಶದ ಗೋರಖ್‌ಪುರದಲ್ಲಿ ಪೊಲೀಸ್‌ ಅಧಿಕಾರಿಗಳು ಹೋಟೆಲ್‌ ಮೇಲೆ ದಾಳಿ ಮಾಡಿದಾಗ ಉದ್ಯಮಿಯ ಸಾವು ಸಂಭವಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ತಂದೆ, ಮಗನಾದ ಪಿ.ಜಯರಾಜ್‌ ಮತ್ತು ಜೆ.ಬೆನ್ನಿಕ್ಸ್‌‌ ಎಂಬವರು ಪೊಲೀಸ್‌ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಒಂಬತ್ತು ಪೊಲೀಸರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಲಾಕ್‌ಡೌನ್‌ ವೇಳೆ ಜಿಲ್ಲಾಡಳಿತಗಳ ಅಧಿಕಾರಿಗಳು ನಾಗರಿಕರ ಮೇಲೆ ದಬ್ಬಾಳಿಕೆ ನಡೆಸಿರುವ ವಿಡಿಯೋಗಳು ಹರಿದಾಡಿವೆ.

“ಅಧಿಕಾರಿಗಳು, ಅದರಲ್ಲೂ ಪೊಲೀಸ್ ಅಧಿಕಾರಿಗಳು ಮಾಡುತ್ತಿರುವ ಕೆಲಸವನ್ನು ನೋಡಿ ನಾವು ತುಂಬಾ ವಿಚಲಿತರಾಗಿದ್ದೇವೆ. ಅಧಿಕಾರಿಗಳಿಂದ, ಮುಖ್ಯವಾಗಿ ಪೊಲೀಸರಿಂದ ನಡೆಯುವ ದೌರ್ಜನ್ಯಗಳ ಕುರಿತ ದೂರುಗಳನ್ನು ವಿಚಾರಣೆಗೆ ಒಳಪಡಿಸಲು ಹೈಕೋರ್ಟ್‌‌ಗಳ ಮುಖ್ಯನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸ್ಥಾಯಿ ಸಮಿತಿ ರಚನೆಗೆ ನನ್ನ ಒಪ್ಪಿಗೆ ಇದೆ” ಎಂದು ನ್ಯಾಯಾಲಯದಲ್ಲಿ ಸಿಜೆಐ ತಿಳಿಸಿದ್ದಾರೆ.

ಛತ್ತೀಸ್‌ಘಡದ ಇಂದಿನ ಕಾಂಗ್ರೆಸ್‌ ಸರ್ಕಾರ, ಇಲ್ಲಿನ ಹೆಚ್ಚುವರಿ ಪೊಲೀಸ್‌ ನಿರ್ದೇಶಕನ ಮೇಲೆ ದಾಖಲಿಸಿರುವ ಪ್ರಕರಣಗಳ (ದೇಶದ್ರೋಹ, ಹಲವು ಅಪರಾಧ ಕೃತ್ಯಗಳು, ಸುಲಿಗೆ, ಬೆದರಿಕೆ) ವಿಚಾರಣೆ ವೇಳೆ ಕೋರ್ಟ್‌ ಅಧಿಕಾರಿಗಳ ದಬ್ಬಾಳಿಕೆಯನ್ನು ಪ್ರಸ್ತಾಪಿಸಿದೆ.

ರಾಜಕೀಯ ಸೇಡು

ಪೊಲೀಸರು ರಾಜಕೀಯ ಸೇಡಿಗೆ ಗುರಿಯಾಗುತ್ತಿರುವುದನ್ನು ಮುಖ್ಯವಾಗಿ ಗಮನಿಸಿದ ಪೀಠವು, “ಇದು ದುರಂತ” ಎಂದು ಬಣ್ಣಿಸಿದೆ. ಮೌಖಿಕವಾಗಿ ಪ್ರಸ್ತಾಪಿಸಿರುವ ಸಿಜೆಐ, “ಒಂದು ರಾಜಕೀಯ ಪಕ್ಷ ಅಧಿಕಾರದಲ್ಲಿದ್ದಾಗ ಪೊಲೀಸ್ ಅಧಿಕಾರಿಗಳು ಆ ಪಕ್ಷದೊಂದಿಗೆ ಇರುತ್ತಾರೆ. ಮತ್ತೊಂದು ಹೊಸ ಪಕ್ಷ ಅಧಿಕಾರಕ್ಕೆ ಬಂದಾಗ, ಹಿಂದಿನ ಪಕ್ಷದೊಂದಿಗೆ ಇದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದಿದ್ದಾರೆ.

ಸಿಂಗ್‌ ಅವರ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ರಕ್ಷಣೆ ನೀಡಿದೆ.

ಇದನ್ನೂ ಓದಿರಿ: ನ್ಯಾಯಾಂಗದಲ್ಲಿ ಶೇ. 50 ಮಹಿಳಾ ಮೀಸಲಾತಿಗೆ ಸಿಜೆಐ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...