Homeಮುಖಪುಟಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ತಮ್ಮ ಶಿಫಾರಸಿನಲ್ಲಿ ನ್ಯಾಯಮೂರ್ತಿ ಕಾಂತ್ ಅವರನ್ನು “ಚುಕ್ಕಾಣಿ ಹಿಡಿಯಲು ಎಲ್ಲಾ ಅಂಶಗಳಲ್ಲಿಯೂ ಸೂಕ್ತ ಮತ್ತು ಸಮರ್ಥ” ಎಂದು ಬಣ್ಣಿಸಿದ್ದಾರೆ, ಇಬ್ಬರೂ ಪರಿಶ್ರಮ ಮತ್ತು ಹೋರಾಟದಿಂದ ಗುರುತಿಸಲ್ಪಟ್ಟ ಒಂದೇ ರೀತಿಯ ಸಾಮಾಜಿಕ ಹಿನ್ನೆಲೆಯನ್ನು ಹಂಚಿಕೊಂಡಿರುವುದಾಗಿ ಹೇಳಿದ್ದಾರೆ” ಎಂದು ವರದಿಯಾಗಿದೆ.

ಸಿಜೆಐ ಗವಾಯಿ ಅವರ ನಂತರ ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್,  ನವೆಂಬರ್ 24 ರಂದು 53ನೇ ಸಿಜೆಐ ಅಧಿಕಾರ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ನವೆಂಬರ್ 23ರಂದು ಹಾಲಿ ಸಿಜೆಐ ಗವಾಯಿ ನಿವೃತ್ತಿಯಾಗಲಿದ್ದಾರೆ.

ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ ಸಿಜೆಐ ಅನ್ನು ಶಿಫಾರಸು ಮಾಡುವಂತೆ ಕೇಳಿದ್ದರು.

ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಪ್ರಕಾರ, ನ್ಯಾಯಮೂರ್ತಿ ಕಾಂತ್ ಅವರು ಫೆಬ್ರವರಿ 10, 1962 ರಂದು ಹರಿಯಾಣದ ಹಿಸಾರ್‌ನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು.

ಅವರು 1981ರಲ್ಲಿ ಹಿಸಾರ್‌ನ ಸರ್ಕಾರಿ ಸ್ನಾತಕೋತ್ತರ ಕಾಲೇಜಿನಿಂದ ಪದವಿ ಪಡೆದರು ಮತ್ತು 1984ರಲ್ಲಿ ರೋಹ್ಟಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿ ಪಡೆದರು.

ನಂತರ 1984ರಲ್ಲಿ ಹಿಸಾರ್‌ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 1985ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಚಂಡೀಗಢಕ್ಕೆ ಸ್ಥಳಾಂತರಗೊಂಡರು.

ನ್ಯಾಯಮೂರ್ತಿ ಕಾಂತ್ ಅವರು ಸಾಂವಿಧಾನಿಕ, ಸೇವಾ ಮತ್ತು ನಾಗರಿಕ ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರು ಹಲವಾರು ವಿಶ್ವವಿದ್ಯಾಲಯಗಳು, ಮಂಡಳಿಗಳು, ನಿಗಮಗಳು, ಬ್ಯಾಂಕುಗಳು ಮತ್ತು ಹೈಕೋರ್ಟ್ ಅನ್ನು ಸಹ ಪ್ರತಿನಿಧಿಸಿದ್ದಾರೆ.

ಜುಲೈ 7, 2000ದಂದು ಅವರನ್ನು ಹರಿಯಾಣದ ಅಡ್ವೊಕೇಟ್ ಜನರಲ್ (ಎಜಿ) ಆಗಿ ನೇಮಿಸಲಾಯಿತು ಮತ್ತು ಮಾರ್ಚ್ 2001ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಜನವರಿ 09, 2004ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಶಾಶ್ವತ ನ್ಯಾಯಾಧೀಶರಾಗಿ ಬಡ್ತಿ ಪಡೆಯುವವರೆಗೂ ಅವರು ಹರಿಯಾಣದ ಅಡ್ವೊಕೇಟ್ ಜನರಲ್ ಹುದ್ದೆಯನ್ನು ಅಲಂಕರಿಸಿದ್ದರು.

ನ್ಯಾಯಮೂರ್ತಿ ಕಾಂತ್ ಅವರನ್ನು ಫೆಬ್ರವರಿ 23, 2007ರಿಂದ ಫೆಬ್ರವರಿ 22, 2011ರವರೆಗೆ ಸತತ ಎರಡು ಅವಧಿಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು.

ಅವರು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಆಶ್ರಯದಲ್ಲಿರುವ ಭಾರತೀಯ ಕಾನೂನು ಸಂಸ್ಥೆಯ ವಿವಿಧ ಸಮಿತಿಗಳ ಸದಸ್ಯರಾಗಿದ್ದಾರೆ. ಕುರುಕ್ಷೇತ್ರ ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದಿಂದ 2011ರಲ್ಲಿ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅವರು ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಕ್ಟೋಬರ್ 5, 2018ರಿಂದ ಜಾರಿಗೆ ಬರುವಂತೆ ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕಚೇರಿಯ ಅಧಿಕಾರ ವಹಿಸಿಕೊಂಡಿದ್ದಾರೆ.

ನ್ಯಾಯಮೂರ್ತಿ ಸೂರ್ಯಕಾಂತ್ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಎತ್ತಿಹಿಡಿದ ಪೀಠ ಮತ್ತು ನಾಗರಿಕರ ಮಾಹಿತಿ ಹಕ್ಕಿನ ಉಲ್ಲಂಘನೆಯನ್ನು ಉಲ್ಲೇಖಿಸಿ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಪೀಠದ ಭಾಗವಾಗಿದ್ದರು. ಅಸ್ಸಾಂ ಒಪ್ಪಂದದ ಭಾಗವಾಗಿರುವ ಪೌರತ್ವ ಕಾಯ್ದೆಯ ಸೆಕ್ಷನ್ 6A ಅನ್ನು ಮೌಲ್ಯೀಕರಿಸುವ ಬಹುಮತದ ಅಭಿಪ್ರಾಯವನ್ನು ಕೂಡ ನ್ಯಾಯಮೂರ್ತಿ ಕಾಂತ್ ಬರೆದಿದ್ದಾರೆ.

ಅವರು ಸಶಸ್ತ್ರ ಪಡೆಗಳಿಗೆ ಒನ್ ರ‍್ಯಾಂಕ್ ಒನ್ ಪೆನ್ಷನ್ (OROP) ಯೋಜನೆಯ ಸಿಂಧುತ್ವವನ್ನು ಎತ್ತಿಹಿಡಿದಿದ್ದರು.

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ತಜ್ಞರ ಸಮಿತಿಯನ್ನು ನೇಮಿಸಿದ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಕಾಂತ್, ಸರ್ಕಾರ ರಾಷ್ಟ್ರೀಯ ಭದ್ರತೆಯನ್ನು ಕಣ್ಗಾವಲುಗೆ ಉಚಿತ ಪಾಸ್ ಆಗಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ‘

ದೆಹಲಿ ಪೊಲೀಸ್ ಆಯುಕ್ತರ ನೇಮಕಾತಿ ಮತ್ತು ಸಾರ್ವಜನಿಕ ಜಲಮೂಲಗಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳ ತೀರ್ಪುಗಳಲ್ಲಿ  ನ್ಯಾ. ಭಾಗವಾಗಿದ್ದರು. ಅವುಗಳು ಸಾರ್ವಜನಿಕ ಅಗತ್ಯಗಳಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಕಾನೂನುಬಾಹಿರ ಎಂದು ಒತ್ತಿ ಹೇಳಿದ್ದರು.

ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಜೈಲುಗಳಲ್ಲಿನ ಜನದಟ್ಟಣೆಯನ್ನು ಕಡಿಮೆ ಮಾಡಲು ಕೈದಿಗಳನ್ನು ಬಿಡುಗಡೆ ಮಾಡುವುದನ್ನು ಪರಿಗಣಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಪೀಠದಲ್ಲಿ ಅವರು ಇದ್ದರು.

ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಕಾಂತ್ ಅವರು ಫೆಬ್ರವರಿ 9, 2027ರಂದು ನಿವೃತ್ತರಾಗಲಿದ್ದಾರೆ. ಅವರು ನವೆಂಬರ್ 12, 2025 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ.

ಮಧ್ಯಪ್ರದೇಶ| ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪ್ರಬಲ ಜಾತಿ ಗುಂಪು; ಎರಡು ಗ್ರಾಮಗಳ ನಡುವೆ ಉದ್ವಿಗ್ನತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...