Homeಮುಖಪುಟಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ತಮ್ಮ ಶಿಫಾರಸಿನಲ್ಲಿ ನ್ಯಾಯಮೂರ್ತಿ ಕಾಂತ್ ಅವರನ್ನು “ಚುಕ್ಕಾಣಿ ಹಿಡಿಯಲು ಎಲ್ಲಾ ಅಂಶಗಳಲ್ಲಿಯೂ ಸೂಕ್ತ ಮತ್ತು ಸಮರ್ಥ” ಎಂದು ಬಣ್ಣಿಸಿದ್ದಾರೆ, ಇಬ್ಬರೂ ಪರಿಶ್ರಮ ಮತ್ತು ಹೋರಾಟದಿಂದ ಗುರುತಿಸಲ್ಪಟ್ಟ ಒಂದೇ ರೀತಿಯ ಸಾಮಾಜಿಕ ಹಿನ್ನೆಲೆಯನ್ನು ಹಂಚಿಕೊಂಡಿರುವುದಾಗಿ ಹೇಳಿದ್ದಾರೆ” ಎಂದು ವರದಿಯಾಗಿದೆ.

ಸಿಜೆಐ ಗವಾಯಿ ಅವರ ನಂತರ ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್,  ನವೆಂಬರ್ 24 ರಂದು 53ನೇ ಸಿಜೆಐ ಅಧಿಕಾರ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ನವೆಂಬರ್ 23ರಂದು ಹಾಲಿ ಸಿಜೆಐ ಗವಾಯಿ ನಿವೃತ್ತಿಯಾಗಲಿದ್ದಾರೆ.

ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ ಸಿಜೆಐ ಅನ್ನು ಶಿಫಾರಸು ಮಾಡುವಂತೆ ಕೇಳಿದ್ದರು.

ಸುಪ್ರೀಂ ಕೋರ್ಟ್ ವೆಬ್‌ಸೈಟ್‌ ಪ್ರಕಾರ, ನ್ಯಾಯಮೂರ್ತಿ ಕಾಂತ್ ಅವರು ಫೆಬ್ರವರಿ 10, 1962 ರಂದು ಹರಿಯಾಣದ ಹಿಸಾರ್‌ನಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು.

ಅವರು 1981ರಲ್ಲಿ ಹಿಸಾರ್‌ನ ಸರ್ಕಾರಿ ಸ್ನಾತಕೋತ್ತರ ಕಾಲೇಜಿನಿಂದ ಪದವಿ ಪಡೆದರು ಮತ್ತು 1984ರಲ್ಲಿ ರೋಹ್ಟಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಪದವಿ ಪಡೆದರು.

ನಂತರ 1984ರಲ್ಲಿ ಹಿಸಾರ್‌ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 1985ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಲು ಚಂಡೀಗಢಕ್ಕೆ ಸ್ಥಳಾಂತರಗೊಂಡರು.

ನ್ಯಾಯಮೂರ್ತಿ ಕಾಂತ್ ಅವರು ಸಾಂವಿಧಾನಿಕ, ಸೇವಾ ಮತ್ತು ನಾಗರಿಕ ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರು ಹಲವಾರು ವಿಶ್ವವಿದ್ಯಾಲಯಗಳು, ಮಂಡಳಿಗಳು, ನಿಗಮಗಳು, ಬ್ಯಾಂಕುಗಳು ಮತ್ತು ಹೈಕೋರ್ಟ್ ಅನ್ನು ಸಹ ಪ್ರತಿನಿಧಿಸಿದ್ದಾರೆ.

ಜುಲೈ 7, 2000ದಂದು ಅವರನ್ನು ಹರಿಯಾಣದ ಅಡ್ವೊಕೇಟ್ ಜನರಲ್ (ಎಜಿ) ಆಗಿ ನೇಮಿಸಲಾಯಿತು ಮತ್ತು ಮಾರ್ಚ್ 2001ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಜನವರಿ 09, 2004ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಶಾಶ್ವತ ನ್ಯಾಯಾಧೀಶರಾಗಿ ಬಡ್ತಿ ಪಡೆಯುವವರೆಗೂ ಅವರು ಹರಿಯಾಣದ ಅಡ್ವೊಕೇಟ್ ಜನರಲ್ ಹುದ್ದೆಯನ್ನು ಅಲಂಕರಿಸಿದ್ದರು.

ನ್ಯಾಯಮೂರ್ತಿ ಕಾಂತ್ ಅವರನ್ನು ಫೆಬ್ರವರಿ 23, 2007ರಿಂದ ಫೆಬ್ರವರಿ 22, 2011ರವರೆಗೆ ಸತತ ಎರಡು ಅವಧಿಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದರು.

ಅವರು ಪ್ರಸ್ತುತ ಸುಪ್ರೀಂ ಕೋರ್ಟ್‌ನ ಆಶ್ರಯದಲ್ಲಿರುವ ಭಾರತೀಯ ಕಾನೂನು ಸಂಸ್ಥೆಯ ವಿವಿಧ ಸಮಿತಿಗಳ ಸದಸ್ಯರಾಗಿದ್ದಾರೆ. ಕುರುಕ್ಷೇತ್ರ ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದಿಂದ 2011ರಲ್ಲಿ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅವರು ಮತ್ತೊಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಕ್ಟೋಬರ್ 5, 2018ರಿಂದ ಜಾರಿಗೆ ಬರುವಂತೆ ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕಚೇರಿಯ ಅಧಿಕಾರ ವಹಿಸಿಕೊಂಡಿದ್ದಾರೆ.

ನ್ಯಾಯಮೂರ್ತಿ ಸೂರ್ಯಕಾಂತ್ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ಎತ್ತಿಹಿಡಿದ ಪೀಠ ಮತ್ತು ನಾಗರಿಕರ ಮಾಹಿತಿ ಹಕ್ಕಿನ ಉಲ್ಲಂಘನೆಯನ್ನು ಉಲ್ಲೇಖಿಸಿ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಪೀಠದ ಭಾಗವಾಗಿದ್ದರು. ಅಸ್ಸಾಂ ಒಪ್ಪಂದದ ಭಾಗವಾಗಿರುವ ಪೌರತ್ವ ಕಾಯ್ದೆಯ ಸೆಕ್ಷನ್ 6A ಅನ್ನು ಮೌಲ್ಯೀಕರಿಸುವ ಬಹುಮತದ ಅಭಿಪ್ರಾಯವನ್ನು ಕೂಡ ನ್ಯಾಯಮೂರ್ತಿ ಕಾಂತ್ ಬರೆದಿದ್ದಾರೆ.

ಅವರು ಸಶಸ್ತ್ರ ಪಡೆಗಳಿಗೆ ಒನ್ ರ‍್ಯಾಂಕ್ ಒನ್ ಪೆನ್ಷನ್ (OROP) ಯೋಜನೆಯ ಸಿಂಧುತ್ವವನ್ನು ಎತ್ತಿಹಿಡಿದಿದ್ದರು.

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ತಜ್ಞರ ಸಮಿತಿಯನ್ನು ನೇಮಿಸಿದ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಕಾಂತ್, ಸರ್ಕಾರ ರಾಷ್ಟ್ರೀಯ ಭದ್ರತೆಯನ್ನು ಕಣ್ಗಾವಲುಗೆ ಉಚಿತ ಪಾಸ್ ಆಗಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ‘

ದೆಹಲಿ ಪೊಲೀಸ್ ಆಯುಕ್ತರ ನೇಮಕಾತಿ ಮತ್ತು ಸಾರ್ವಜನಿಕ ಜಲಮೂಲಗಳ ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳ ತೀರ್ಪುಗಳಲ್ಲಿ  ನ್ಯಾ. ಭಾಗವಾಗಿದ್ದರು. ಅವುಗಳು ಸಾರ್ವಜನಿಕ ಅಗತ್ಯಗಳಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವುದು ಕಾನೂನುಬಾಹಿರ ಎಂದು ಒತ್ತಿ ಹೇಳಿದ್ದರು.

ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಜೈಲುಗಳಲ್ಲಿನ ಜನದಟ್ಟಣೆಯನ್ನು ಕಡಿಮೆ ಮಾಡಲು ಕೈದಿಗಳನ್ನು ಬಿಡುಗಡೆ ಮಾಡುವುದನ್ನು ಪರಿಗಣಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಪೀಠದಲ್ಲಿ ಅವರು ಇದ್ದರು.

ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಕಾಂತ್ ಅವರು ಫೆಬ್ರವರಿ 9, 2027ರಂದು ನಿವೃತ್ತರಾಗಲಿದ್ದಾರೆ. ಅವರು ನವೆಂಬರ್ 12, 2025 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ.

ಮಧ್ಯಪ್ರದೇಶ| ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಪ್ರಬಲ ಜಾತಿ ಗುಂಪು; ಎರಡು ಗ್ರಾಮಗಳ ನಡುವೆ ಉದ್ವಿಗ್ನತೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...